Advertisement

ಹಣಕಾಸಿನ ವಿಚಾರದಲ್ಲಿ ವೈಷಮ್ಯ : ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

09:32 PM Jun 07, 2022 | Team Udayavani |

ಶಿವಮೊಗ್ಗ: ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರ್ಕೆಟ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

Advertisement

ಸೆಂಥಿಲ್‌ ಕುಮಾರ್‌(40) ಎಂಬಾತ ಮೇಲೆ ಮಾರಕಾಸ್ತ್ರದಿಂದ ಹಲ್ಲೆಮಾಡಲಾಗಿದ್ದು, ಗಾಯಾಳುವನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜೋಗಿ ಸಂತೋಷ್‌ ಎಂಬಾತ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ವ್ಯಕ್ತಿ.

ಕಳೆದ ನಾಲ್ಕು ವರ್ಷಗಳಿಂದ ಇಬ್ಬರ ನಡುವೆ ಫೈನ್ಯಾನ್ಸ್‌ ನ ಹಣಕಾಸಿನ ವಿಚಾರವಾಗಿ ವೈಷಮ್ಯವಿತ್ತು. ಈ ವಿಚಾರವಾಗಿ ಹಲವು ಸಲ ಇಬ್ಬರ ನಡುವೆ ಗಲಾಟೆ ಕೂಡ ನಡೆದಿದೆ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಹಾಸಿಗೆ ಹಿಡಿದ ಗಂಡನ ಆರೈಕೆ ಮಾಡಲಾಗದೆ ಗಂಡನನ್ನೇ ಚೂರಿಯಿಂದ ಇರಿದು ಕೊಲೆಗೈದ ಪತ್ನಿ

Advertisement
Advertisement

Udayavani is now on Telegram. Click here to join our channel and stay updated with the latest news.

Next