Advertisement

Clash: ಹಳೆ ದ್ವೇಷ: ಎರಡು ಗುಂಪುಗಳ ಮಧ್ಯೆ ಗಲಾಟೆ… ಐದು ಮಂದಿಗೆ ಚಾಕು ಇರಿತ

09:18 AM Sep 22, 2023 | Team Udayavani |

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಐದು ಮಂದಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ಆಲ್ಕೊಳ ಸರ್ಕಲ್‌ ಸಮೀಪ ಎಲ್‌ಐಸಿ ಕಚೇರಿ ಬಳಿ ಗುರುವಾರ ಮಧ್ಯರಾತ್ರಿ ನಡೆದಿದೆ.

Advertisement

ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು. ಇದೆ ವಿಚಾರವಾಗಿ ಕಳೆದ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿದೆ. ಇದೆ ವೇಳೆ ಪವನ್‌ ಮತ್ತು ಆತನ ಜೊತೆಗಿದ್ದವರು, ಕಿರಣ್‌ ಮತ್ತು ಆತನ ಸ್ನೇಹಿತರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಾಯಾಳುಗಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು.

ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Shocking: ಕುಟುಂಬ ಸದಸ್ಯರ ಎದುರೇ 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ದರೋಡೆ

Advertisement
Advertisement

Udayavani is now on Telegram. Click here to join our channel and stay updated with the latest news.

Next