Advertisement

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

01:53 AM Sep 24, 2024 | Esha Prasanna |

ಶಿವಮೊಗ್ಗ: ತಿರುಪತಿ ಪ್ರಸಾದದ ವಿಷಯದಲ್ಲಿ ಸರಕಾರಿ ವ್ಯವಸ್ಥೆ ಮಾಡಿದ ಅಪಚಾರವು ಅಕ್ಷಮ್ಯ. ದೇವಸ್ಥಾನಗಳ ಮೇಲೆ ಇರುವ ಸರಕಾರದ ಹಿಡಿತವನ್ನು ಹಿಂದೆಗೆದುಕೊಳ್ಳುವಂತೆ ಸಮಾಜವು ಆಗ್ರಹಿಸಬೇಕಾಗಿದೆ ಎಂದು ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ ಪ್ರಕಟನೆಯಲ್ಲಿ ತಿಳಿಸಿದೆ.

Advertisement

ನಡೆದಿರುವ ಅಪಚಾರಕ್ಕೆ ಮಹಾಸ್ವಾಮಿಗಳು ಸ್ವತಃ ಶಾಸ್ತ್ರೀಯವಾದ ಪ್ರಾಯಶ್ಚಿತ್ತ ವಿಧಾನವನ್ನು ಅನುಸರಿಸುತ್ತಿದ್ದಾರೆ. ಮಂಗಳವಾರದಿಂದ 3 ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಹಿಂದೂ ಸಮಾಜವು ಸಾಮಾಜಿಕ ಜಾಗೃತಿ ಜತೆಗೆ ತಮ್ಮ ಆಧ್ಯಾತ್ಮಿಕ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳಲು ಇದೊಂದು ಮಾರ್ಗವಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆ. ಆದರೆ ಆ ಬಲವು ಕೇವಲ ಸಾಮಾಜಿಕ ಹಾಗೂ ರಾಜಕೀಯ ಸಂಖ್ಯಾಬಲವು ಮಾತ್ರವಲ್ಲದೆ ಆಧ್ಯಾತ್ಮಿಕ ತಳಹದಿಯ ಮೇಲೆ ನಿರ್ಮಾಣವಾದ ಬಲವಾಗಬೇಕು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next