Advertisement

Shivamogga;ಕೇಂದ್ರ ಕಾರಾಗೃಹದಲ್ಲಿ ಎಸ್ ಪಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ!

02:05 PM Aug 28, 2024 | Vishnudas Patil |

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹ ಕ್ಕೆ ಬುಧವಾರ(ಆ 28) ಬೆಳ್ಳಂಬೆಳಗ್ಗೆ ಎಸ್ ಪಿ(Superintendent of Police) ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದೆ.

Advertisement

ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ 120 ಕ್ಕೂ ಹೆಚ್ಚು ಅಧಿಕಾರಿ ಸಿಬಂದಿಗಳನ್ನೊಳಗೊಂಡ ತಂಡದಿಂದ ಕಾರ್ಯಾಚರಣೆ ಮತ್ತು ಬ್ಯಾರಕ್ ತಪಾಸಣೆ ನಡೆಸಲಾಗಿದೆ.

ರೇಣುಕಾಸ್ವಾಮಿ‌ ಕೊಲೆ ಆರೋಪಿಗಳಿಬ್ಬರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿರುವ ಮುನ್ನವೇ ನಡೆದ ದಾಳಿ ಮಹತ್ವ ಪಡೆದುಕೊಂಡಿದೆ.

ಆರೋಪಿಗಳಾದ ಲಕ್ಷ್ಮಣ ಹಾಗು ಜಗದೀಶ್ ಅವರನ್ನು ಪೊಲೀಸರು ಶಿವಮೊಗ್ಗ ಕಾರಾಗೃಹಕ್ಕೆ ಕರೆತರುತ್ತಿದ್ದಾರೆ.ತಪಾಸಣೆ ವೇಳೆ ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next