Advertisement

Shivamogga: 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ

01:08 PM May 22, 2024 | Kavyashree |

ಶಿವಮೊಗ್ಗ: 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ.

Advertisement

ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ.

ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ ವೇಳೆ ಪೋದೆಯಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ದಾಳಿ ನಡೆಸಿದೆ.

ಹೆಜ್ಜೇನು ದಾಳಿಯಿಂದ ಗಾಯಗೊಂಡವರಿಗೆ ಭದ್ರಾವತಿ ಹಾಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಜ್ಜೇನು ದಾಳಿ ವೇಳೆ 12 ವರ್ಷದ ಬಾಲಕನೋರ್ವ ಎರಡು ವರ್ಷದ ಮಗುವಿನ ರಕ್ಷಣೆ ಮಾಡಿದ್ದಾನೆ. ಬಾಲಕ ಗಗನ್ 10 ಕ್ಕೂ ಹೆಚ್ಚು ಹೆಜ್ಜೇನು ಕಚ್ಚಿಸಿಕೊಂಡರೂ ಸಹ ಎರಡು ವರ್ಷದ ಬಾಲಕನ ರಕ್ಷಣೆ ಮಾಡಿ ಸಾಹಸ ಮೆರೆದಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next