Advertisement

ಗಲಾಟೆಗೆ ನಾವು ಕಾರಣ ಅಲ್ಲ: ರಾಘವೇಂದ್ರ

08:32 PM Feb 24, 2022 | Adarsha |

ಶಿವಮೊಗ್ಗ: ಮೃತದೇಹದ ಮೆರವಣಿಗೆ ವೇಳೆಯ ಗಲಾಟೆಗೆ ನಾವು ಕಾರಣರಲ್ಲ.ಅಂದು ಸೆಕ್ಷನ್‌ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು,ಯಾರೂ ಸಹ ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದಕ್ಕೆ ಬರುವುದಿಲ್ಲ.ತುಂಬಾ ಸೂಕ್ಷ ¾ವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು.

Advertisement

ಈಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ. ಹರ್ಷನ ಅಂತಿಮಸಂಸ್ಕಾರ ಶಾಂತಿಯುತವಾಗಿ ನಡೆಯಲು ಎಲ್ಲ ಕ್ರಮ ತೆಗೆದುಕೊಂಡಿದ್ದೆವು.ಈಶ್ವರಪ್ಪ ನೇತೃತ್ವದಲ್ಲಿ ನಾನು ಹಾಗೂ ನಾಯಕರು ಒಟ್ಟಾಗಿ ಶಾಂತಿಯುತವಾಗಿಎಲ್ಲವನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೆವು. ಪೊಲೀಸ್‌ಇಲಾಖೆ ಜತೆ ಕೈ ಜೋಡಿಸುವ ಕೆಲಸ ಮಾಡಿದ್ದೆವು.

ಪೊಲೀಸ್‌ ಇಲಾಖೆಮೆರವಣಿಗೆ ಬೇಡ ಎಂದು ಹೇಳಿದ್ದರು. ಆದರೂ ಅದನ್ನು ಕೇಳುವಪರಿಸ್ಥಿತಿಯಲ್ಲಿ ಯಾರೂ ಇರಲಿಲ್ಲ. ನಾವೆಲ್ಲ ಪೊಲೀಸರಿಗೆ ಸಹಕಾರ ನೀಡಿದ್ದೇವೆ.ಶಿವಮೊಗ್ಗ ಶಾಂತಿಗೆ ಹೆಸರುವಾಸಿಯಾದ ನಗರ. ಆದರೆ ಕಲ್ಲು ತೂರಾಟದಿಂದಕೆಟ್ಟ ಸಂದೇಶ ಹೋಗಿದೆ. ಇದಕ್ಕೆ ಮೂಲ ಕಾರಣರಾದವರನ್ನು ಬಂಧಿ ಸಬೇಕು.ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ಘಟನೆಯಾದ ಮೇಲೆ ಸಾಂತ್ವನಹೇಳುವ ದುಸ್ಥಿತಿ ಬರಬಾರದು. ಈ ರೀತಿಯ ಘಟನೆಗಳು ಮುಂದೆ ಆಗದಂತೆಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತಯೋಚಿಸುವ ಕಾಲ ಬಂದಿದೆ. ಹರ್ಷ ಕೊಲೆ ಆರೋಪಿಗಳನ್ನು ಬಂ ಧಿಸಿರುವಪೊಲೀಸರ ಕಾರ್ಯ ಶ್ಲಾಘನೀಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next