Advertisement

ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ ಹೊಸ ಸೇತುವೆ ಮುಳುಗಡೆ

12:44 PM Jul 15, 2022 | Kavyashree |

ಶಿವಮೊಗ್ಗ: ಕಳೆದ 2 ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಶಿವಮೊಗ್ಗದ ಭದ್ರಾವತಿ ನಗರದಲ್ಲಿರುವ ಹೊಸ ಸೇತುವೆ ಮುಳುಗಡೆಯಾಗಿದೆ.

Advertisement

ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಭದ್ರಾ ನದಿಯ ಪ್ರವಾಹದಿಂದ ಭದ್ರಾವತಿ ಬಸ್ ನಿಲ್ದಾಣ ಸಮೀಪದ ಹೊಸ ಸೇತುವೆ ಮುಳುಗಡೆಯಾಗಿದೆ.

ಭದ್ರಾವತಿ ಓಲ್ಡ್ ಟೌನ್ ಮತ್ತು ಸಿದ್ದಾರೂಢ ನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ಸೇತುವೆ ಇದಾಗಿದ್ದು, ತಾಲೂಕು ಆಡಳಿತ ತಡರಾತ್ರಿಯಿಂದಲೇ ಬ್ಯಾರಿಕೇಡ್ ಹಾಕಿ, ಸಂಚಾರ ಬಂದ್ ಮಾಡಿದೆ.

ಭದ್ರಾವತಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಹಿನ್ನೆಲೆ ಭದ್ರಾವತಿಯ ಕಾವಲ್ ಗುಂದಿಯ 30 ಮನೆಯಲ್ಲಿದ್ದ 120 ಜನರನ್ನು ತಾಲೂಕು ಆಡಳಿತ ವತಿಯಿಂದ ಹುತ್ತಾ ಕಾಲೋನಿಯ ಒಕ್ಕಲಿಗರ ಭವನದಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next