Advertisement

ಬಿಜೆಪಿ ಯುವ ಮುಖಂಡನ ಹತ್ಯೆ ಖಂಡಿಸಿ ಪ್ರತಿಭಟನೆ

07:37 PM Jul 28, 2022 | Adarsha |

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರಹತ್ಯೆಗೈದ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗ ನಗರಬಿಜೆಪಿ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿಪ್ರತಿಭಟನೆ ನಡೆಸಲಾಯಿತು.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಬಿಜೆಪಿಜಿಲ್ಲಾ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರುಅವರ ಹತ್ಯೆ ಹಿಂದೆ ಮತಾಂಧ ಶಕ್ತಿಗಳಿವೆ. ಇದನ್ನುಬಯಲಿಗೆಳೆದು ಹಂತಕರಿಗೆ ತಕ್ಕ ಶಿಕ್ಷೆ ಕೊಡಿಸಬೇಕುಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಎಸ್‌.ಎನ್‌.ಚನ್ನಬಸಪ್ಪ ಮಾತನಾಡಿ , ಹಿಂದೂ ಸಮಾಜವನ್ನುರಕ್ಷಣೆ ಮಾಡುವುದೇ ಕಷ್ಟವಾಗುತ್ತಿದೆ. ಹಿಂದೂಗಳಹತ್ಯೆ ನಿರಂತರವಾಗಿ ನಡೆಯುತ್ತಿದೆ. ಹಿಂದೂಗಳಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲವು ದುಷ್ಟಶಕ್ತಿಗಳು ಅಟ್ಟಹಾಸ ಮೆರೆಯತೊಡಗಿದ್ದಾರೆ.

ಸರ್ಕಾರಹಿಂದೂಗಳ ಮರಣಗಳನ್ನು ಲೆಕ್ಕಹಾಕಲು ಮಾತ್ರ ಇದೆ.ಹಿಂದೂ ಸಮಾಜದವರು ಮೃತಪಟ್ಟಾಗ ಶ್ರದ್ಧಾಂಜಲಿಸಭೆಗಳನ್ನು ಮಾಡಬೇಕಾಗಿ ಬಂದಿರುವುದು ದುರಂತಎಂದರು. ಎಲ್ಲ ಹಿಂದೂಗಳಿಗೂ ರಕ್ಷಣೆ ಬೇಕೇ ಬೇಕು.ಇಲ್ಲದಿದ್ದರೆ ಅವರೇ ತಮ್ಮ ರಕ್ಷಣೆ ಮಾಡಿಕೊಳ್ಳುವಕಾಲ ದೂರವಿಲ್ಲ. ಸರ್ಕಾರ ಈ ಬಗ್ಗೆ ನಿರ್ಲಕ್ಷÂವಹಿಸಬಾರದು. ಹಿಂದೂ ಕಾರ್ಯಕರ್ತರ ಹತ್ಯೆಅತ್ಯಂತ ನೋವಿನ ಸಂಗತಿ ಎಂದು ಭಾವುಕರಾಗಿಕಣ್ಣೀರಿಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next