Advertisement

ದೇವರ ಮೊರೆಹೋದ ಶರಾವತಿ ಸಂತ್ರಸ್ತರು; ಕಲ್ಲುಕೊಪ್ಪದಿಂದ ಧರ್ಮಸ್ಥಳದವರೆಗೆ ಪಾದಯಾತ್ರೆ !

10:06 PM Oct 07, 2021 | Adarsha |

ತೀರ್ಥಹಳ್ಳಿ : ತಾಲೂಕಿನಾದ್ಯಂತ ಇತ್ತೀಚಿಗೆ ಅತೀ ಹೆಚ್ಚು ಸುದ್ದಿ ಮಾಡಿದ್ದು ಎಂದರೆ ಅದು ಶರಾವತಿ ಸಂತ್ರಸ್ತರ ಹೋರಾಟ. ಹೌದು ಈಗಾಗಲೇ ತಾಲೂಕಿನ ಹಣಗೇರೆ ಕಟ್ಟೆ ಸಮೀಪ ಕಲ್ಲುಕೊಪ್ಪದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಶರಾವತಿ ಮುಳುಗಡೆ ಸಂತ್ರಸ್ತರು ಈಗ ದೇವರ ಮೊರೆ ಹೋಗಿದ್ದಾರೆ.

Advertisement

ಕಲ್ಲುಕೊಪ್ಪದಿಂದ ಸುಮಾರು 21 ಜನ  ಧರ್ಮಸ್ಥಳಕ್ಕೆ ಕಾಲ್ನಡಿಗೆ ಮೂಲಕ ಪಾದಯಾತ್ರೆ ಸಂಚರಿಸಲಿದ್ದಾರೆ. ಬರಿ ಕಾಲಿನಲ್ಲಿ ಅಂದಾಜು 200 ಕಿ ಮೀ ನಡೆದು ಧರ್ಮಸ್ಥಳದ  ಮಂಜುನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಸಂಕ್ಲಾಪುರ ಮತ್ತು ಕಲ್ಲು ಕೊಪ್ಪದ ಶರಾವತಿ ಮುಳುಗಡೆ ಸಂತ್ರಸ್ಥರಾದ ರಾಘವೇಂದ್ರ ಸಂಕ್ಲಾಪುರ, ಪುರುಷೋತ್ತಮ, ದಿನೇಶ, ಸುದರ್ಶನ, ಚೇತನ, ಪ್ರತೀಕ, ಭರತ್, ಜಗದೀಶ  ಹಾಗೂ 21 ಜನರ ತಂಡ ಈ ವರೆಗೆ ಹಲವಾರು ಹೋರಾಟವನ್ನು ಮಾಡಿ ಫಲಕಾರಿಯಾಗದ ಕಾರಣ ಇದೀಗ ದೇವರ ಮೊರೆ ಹೋಗಲು ನಿರ್ಧರಿಸಿ ಧರ್ಮಸ್ಥಳದ ವರೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next