Advertisement

ಕುವೆಂಪು ವಿವಿ ಪ್ರವೇಶಾತಿ ಕೌನ್ಸಿಲಿಂಗ್‌ ಆರಂಭ

05:33 PM Dec 28, 2021 | Adarsha |

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿಸೋಮವಾರ ನಡೆದ ಸ್ನಾತಕೋತ್ತರ ಪದವಿಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳುಉತ್ಸಾಹದೊಂದಿಗೆ ಪ್ರವೇಶ ಪಡೆದರು.ವಿಶ್ವವಿದ್ಯಾಲಯದ ಮುಖ್ಯ ಆವರಣ,ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿಕೇಂದ್ರ ಮತ್ತು 20 ಕ್ಕೂ ಹೆಚ್ಚು ಸ್ನಾತಕೋತ್ತರಕಾಲೇಜುಗಳ ಎಲ್ಲಾ ವಿಭಾಗಗಳಿಗೆಡಿಸೆಂಬರ್‌ 27, 28, ಮತ್ತು 29ರಂದುಪ್ರವೇಶಾತಿ ಕೌನ್ಸೆಲಿಂಗ್‌ ಹಮ್ಮಿಕೊಳ್ಳಲಾಗಿದೆ.

Advertisement

ಮೊದಲ ದಿನವಾದ ಸೋಮವಾರಮೆರಿಟ್‌ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆಯಾವುದೇ ತೊಡಕುಗಳಿಲ್ಲದೆ ನಡೆಯಿತು.28 ಹಾಗೂ 29ರಂದು ಪೇಮೆಂಟ್‌ ಮತ್ತುಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕವಿಭಾಗದ ಪ್ರಕಾರ ಸೋಮವಾರ ಸಂಜೆ4 ಗಂಟೆ ಹೊತ್ತಿಗೆ ಎಲ್ಲ ಸ್ನಾತಕೋತ್ತರವಿಭಾಗಗಳ ಶೇ.65ರಷ್ಟು ಸೀಟುಗಳುಭರ್ತಿಯಾಗಿದ್ದವು ಹಾಗೂ ಕೋವಿಡ್‌19ಕಾರಣದಿಂದಾಗಿ ಇನ್ನುಳಿದ ಆಕಾಂಕ್ಷಿಗಳುಮಂಗಳವಾರ ಮತ್ತು ಬುಧವಾರ ವಿವಿಗೆಆಗಮಿಸಿ ಪ್ರವೇಶ ಪಡೆಯಲಿದ್ದಾರೆ.

ಪ್ರವೇಶಾತಿ ಪಡೆದ ಕೋರ್ಸುಗಳದಾಖಲಾತಿ ನಿರ್ವಹಣೆ ಹಾಗೂ ಶುಲ್ಕಭರಿಸಲು ವಿದ್ಯಾರ್ಥಿಗಳಿಗೆ ಸುಲಭಮಾದರಿಗಳಲ್ಲಿ ಅವಕಾಶ ನೀಡಲಾಗಿತ್ತು.ಆಫ್‌ಲೈನ್‌ನಲ್ಲಿ ಶುಲ್ಕ ಭರಿಸುವವರ ಸಂಖ್ಯೆಹೆಚ್ಚಾದಂತೆ ಬ್ಯಾಂಕಿನಲ್ಲಿ ಮೂರು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಹೆಚ್ಚುವರಿಯಾಗಿವಿವಿಯ ಆಡಳಿತ ಭವನದ ಹಣಕಾಸುವಿಭಾಗದಲ್ಲಿ ಮತ್ತೆ ಮೂರು ಕೌಂಟರ್‌ಗಳನ್ನುತೆರೆದು ಶುಲ್ಕ ಭರಿಸುವ ಪ್ರಕ್ರಿಯೆಯನ್ನು ಸುಲಲಿತಗೊಳಿಸಲಾಯಿತು.

ಕೋವಿಡ್‌-19 ಮಾರ್ಗದರ್ಶಿ ಸೂತ್ರಗಳೊಂದಿಗೆವಿದ್ಯಾರ್ಥಿಗಳು ಮತ್ತು ಪಾಲಕರುಸುರಕ್ಷಿತವಾಗಿ ಪ್ರವೇಶಾತಿ ಪ್ರಕ್ರಿಯೆಯಲ್ಲಿಪಾಲ್ಗೊಂಡಿದ್ದರು.ವಿಶ್ವವಿದ್ಯಾಲಯವು ಪ್ರವೇಶಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿಆಯೋಜಿಸಿದ್ದು, ಕೊಠಡಿಗಳನ್ನುಸ್ಯಾನಿಟೈಸ್‌ ಮಾಡಲಾಗಿತ್ತು. ದೇಹದಉಷ್ಣಾಂಶ ಪರೀಕ್ಷಿಸಿ ವಿವಿ ಕ್ಯಾಂಪಸ್‌ಒಳಬಿಡುವ ಜೊತೆಗೆ ವಿಭಾಗಗಳಲ್ಲಿಕೂರಲು 6ಅಡಿ ಅಂತರದಲ್ಲಿ ಕುರ್ಚಿಗಳನ್ನುಹಾಕಲಾಗಿತ್ತು.

ಕರ್ನಾಟಕದ ವಿವಿಧಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚುಆಕಾಂಕ್ಷಿಗಳು ಮತ್ತು ಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿಭಾಗವಹಿಸಿದ್ದರು. ವಿವಿಯ ವಿಭಾಗಗಳನ್ನುಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು,ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು,ಅನ್ವಯಿಕ ವಿಜ್ಞಾನಗಳು ಮತ್ತು ಮೂಲವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿಸಮಾಜವಿಜ್ಞಾನ, ವಾಣಿಜ್ಯಶಾಸ್ತ್ರ ಮತ್ತುಬಸವ ಭವನ, ಗಣಿತ ವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು.

Advertisement

ಮುಂದಿನಎರಡು ದಿನವೂ ಇದೇ ಕಟ್ಟಡಗಳಲ್ಲಿಕೌನ್ಸಿಲಿಂಗ್‌ ನಡೆಯಲಿದೆ.ವಿಶ್ವವಿದ್ಯಾಲಯಕ್ಕೆ ಆಗಮಿಸುವವಿದ್ಯಾರ್ಥಿಗಳು ಮತ್ತು ಪೋಷಕರಿಗೆವಿವಿಯ ದ್ವಾರದ ಬಳಿಯೇ ವಿಭಾಗವಾರುಕೌನ್ಸೆಲಿಂಗ್‌ ಕಟ್ಟಡದ ವಿವರ,ಮಾರ್ಗತೋರುವ ಸೂಚನಾ ಫಲಕಗಳು,ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತಕೋರುವ ಫಲಕಗಳನ್ನು ಹಾಕಲಾಗಿತ್ತು.ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕಮಾಹಿತಿ ನೀಡಲಾಗಿತ್ತು. ಸೀಟುಗಳ ವಿವರ,ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆದಾರಿಯಾಗದಂತೆ ಡಿಜಿಟಲ್‌ಬೋಡ್‌ìಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು ಹಾಗೂಮೈಕ್‌ ಮೂಲಕ ಆಯ್ಕೆಗೊಂಡವರಹೆಸರುಗಳನ್ನು ಘೋಷಿಸಲಾಗುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next