Advertisement

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

10:39 PM Jul 08, 2024 | Esha Prasanna |

ಶಿವಮೊಗ್ಗ: ನಾನು ಮಾನಸಿಕವಾಗಿ ಈಗಲೂ ಬಿಜೆಪಿಯಲ್ಲಿ ಇದ್ದೇನೆ. ಮತ್ತೆ ತುರ್ತಾಗಿ ಆ ಪಕ್ಷವನ್ನು ಸೇರುವ ಚಿಂತನೆ ಇಲ್ಲ. ಅಪ್ಪ, ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

Advertisement

ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ನಿಂತಿದ್ದೆ. ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆಯಿದೆ. ಆದರೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು. ವಾಲ್ಮೀಕಿ ನಿಗಮ ಹಗರಣದಲ್ಲಿ ಅಧ್ಯಕ್ಷ ರಾಜೀನಾಮೆ ನೀಡಿಲ್ಲ. ಈ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಪರಿಶಿಷ್ಟ ವರ್ಗದವರಿಗೆ ಕಾಂಗ್ರೆಸ್‌ ಹೇಗೆ ಮೋಸ ಮಾಡಿಕೊಂಡು ಬಂದಿದೆ ಎನ್ನುವುದಕ್ಕೆ ಇದೊಂದು ನಿದರ್ಶನ. ಮಾಜಿ ಸಚಿವ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರನ್ನು ಎಸ್‌ಐಟಿ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಕೂಡಲೇ ಬಂಧಿಸಬೇಕು ಎಂದರು.

ಮುಡಾ ನಿವೇಶನ ಹಗರಣದಲ್ಲಿ ಮುಖ್ಯಮಂತ್ರಿ ಸಿಕ್ಕಿಬಿದ್ದಿದ್ದಾರೆ. ಮನೆಯಲ್ಲಿರುವ ಹೆಣ್ಣು ಮಕ್ಕಳನ್ನು ಬೀದಿಗೆ ತಂದಿದ್ದಾರೆ. ನ್ಯಾಯಾಧೀಶರ ಕೈಗೆ ಪ್ರಕರಣವನ್ನು ಕೊಟ್ಟು ತನಿಖೆ ಮಾಡಿಸಲಿ. ಸಿಎಂ ಕುಟುಂಬದವರು ಭಾಗಿಯಾಗಿದ್ದಾರೆ. ಸಿಎಂ ಕೂಡಲೇ ರಾಜೀನಾಮೆ ನೀಡಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿದ ಅನಂತರ ಮತ್ತೆ ಬೇಕಾದರೆ ಸಿಎಂ ಆಗಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next