Advertisement

Shivamogga: ಭಾರಿ ಮಳೆ: ರೈಲ್ವೆ ಹಳಿಗೆ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿ ಸಂಚಾರದಲ್ಲಿ ವ್ಯತ್ಯಯ

12:25 PM Oct 09, 2024 | Kavyashree |

ಶಿವಮೊಗ್ಗ: ಅ.8ರ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿಗೆ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿದ್ದು ಸಂಚಾರದಲ್ಲಿ ವ್ಯತ್ಯಯವಾಗಿದೆ.

Advertisement

ಟ್ರ್ಯಾಕ್‌ ಮ್ಯಾನ್‌ ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಳಿ ರಿಪೇರಿ ಕಾರ್ಯದ ಹಿನ್ನೆಲೆ ತಾಳಗುಪ್ಪದಿಂದ ಬೆಂಗಳೂರು ಮತ್ತು ಮೈಸೂರಿಗೆ ಹೊರಟಿದ್ದ ರೈಲುಗಳು ತಡವಾಗಿ ಸಂಚರಿಸುತ್ತಿವೆ.

ಕುಂಸಿ – ಆನಂದಪುರ ರೈಲ್ವೆ ಮಾರ್ಗದ ನಡುವಿನ ಸೂಡುರು ಬಳಿ ಜಲ್ಲಿ ಕೊಚ್ಚಿ ಹೋಗಿತ್ತು. ಇಳಿಜಾರು ಪ್ರದೇಶವಾಗಿದ್ದರಿಂದ ಮಳೆ ನೀರು ರಭಸವಾಗಿ ಹರಿದಾಗ ಜಲ್ಲಿ ಕೊಚ್ಚಿ ಹೋಗಿದೆ ಎನ್ನಲಾಗಿದೆ. ಟ್ರ್ಯಾಕ್‌ ಮ್ಯಾನ್‌ಗಳು ಗಸ್ತು ವೇಳೆ ಜಲ್ಲಿ ಕೊಚ್ಚಿ ಹೋಗಿರುವುದು ಗೊತ್ತಾಗಿದೆ. ಕೂಡಲೇ ರೈಲು ನಿಲ್ದಾಣಗಳಿಗೆ ವಿಷಯ ತಿಳಿಸಿದ್ದರು. ರೈಲ್ವೆ ಇಂಜಿನಿಯರಿಂಗ್‌ ತಂಡ, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಜಲ್ಲಿ ಭರ್ತಿ ಮಾಡಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಟ್ರ್ಯಾಕ್‌ ರಿಪೇರಿ ಹಿನ್ನೆಲೆ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ಇಂಟರ್‌ಸಿಟಿ ರೈಲು ಸಾಗರ – ಆನಂದಪುರ ನಿಲ್ದಾಣಗಳ ನಡುವೆ ನಿಲ್ಲಿಸಲಾಗಿತ್ತು. ಸದ್ಯ ಈ ರೈಲು ಸುಮಾರು 2 ಗಂಟೆ ತಡವಾಗಿ ಸಂಚರಿಸುತ್ತಿದೆ. ಬೆಳಗ್ಗೆ 6.15ಕ್ಕೆ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್‌ ರೈಲು ಕೂಡ ವಿಳಂಬವಾಗಿ ಸಂಚರಿಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next