Advertisement

Shivamogga: ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ; ನಾಲ್ಕೈದು ಮಂದಿಗೆ ಗಾಯ

10:47 PM Oct 01, 2023 | Shreeram Nayak |

ಶಿವಮೊಗ್ಗ:ಈದ್‌ ಮಿಲಾದ್‌ ಮೆರವಣಿಗೆ ವೇಳೆ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಲ್ಕೈದು ಮಂದಿ ಗಾಯಗೊಂಡಿದ್ದಾರೆ.

Advertisement

ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಸೆ.28ರಂದು ಹಿಂದೂ ಮಹಾಸಭಾ ಗಣೇಶ ಉತ್ಸವದ ಹಿನ್ನೆಲೆಯಲ್ಲಿ ಅ.1ರಂದು ಮೆರವಣಿಗೆ ನಡೆಸುವುದಾಗಿ ಮುಸ್ಲಿಂ ಮುಖಂಡರು ತೀರ್ಮಾನಿಸಿದ್ದರು. ಅದರಂತೆ ಎರಡು ದಿನದಿಂದ ಎಲ್ಲೆಡೆ ಅಲಂಕಾರ ಮಾಡಿ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ನಗರದ ವಿವಿಧೆಡೆ ನಡೆದ ಮೆರವಣಿಗೆಗಳು ಯಾವುದೇ ತೊಂದರೆ ಇಲ್ಲದೆ ನಡೆದಿದ್ದವು. ಆದರೆ ಶಾಂತಿನಗರ ರಾಗಿಗುಡ್ಡದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಖುದ್ದು ಎಸ್‌ಪಿ ಜಿ.ಕೆ. ಮಿಥುನ್‌ಕುಮಾರ್‌ ಅವರು ಉದ್ರಿಕ್ತರನ್ನು ಚದುರಿಸಲು ಮುಂದಾಗಿದ್ದು, ಅವರ ಮೇಲೂ ಕಲ್ಲು ತೂರುವ ಯತ್ನ ನಡೆಯಿತು.

ಕೊನೆಗೆ ಲಾಠಿ ಪ್ರಹಾರ ಮಾಡಿ ಉದ್ರಿಕ್ತರನ್ನು ಚದುರಿಸಲಾಯಿತು. ರಾಗಿಗುಡ್ಡದಲ್ಲಿ ಸೆಕ್ಷನ್‌ 144 ಹಾಕಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next