Advertisement

ಶಿವಮೊಗ್ಗ: ಬಾಂಬ್‌ ನಿಷ್ಕ್ರಿಯ ದಳ ಆಗಮಿಸಿದ ಬಳಿಕವಷ್ಟೇ ಮುಂದಿನ ಕ್ರಮ

09:18 AM Jan 22, 2021 | Team Udayavani |

ಶಿವಮೊಗ್ಗ: ನಗರದ ಹೊರವಲಯದಲ್ಲಿ ಸಂಭವಿಸಿರುವ ಭಾರೀ ಸ್ಫೋಟ ಸ್ಥಳಕ್ಕೆ ಬಾಂಬ್‌ ನಿಷ್ಕ್ರಿಯ ದಳ (ಬಿಡಿಡಿಎಸ್‌) ಆಗಮಿಸುತ್ತಿದ್ದು ನಂತರವೇ ತನಿಖೆ ಸಾಧ್ಯತೆ ಇದೆ.

Advertisement

ಸ್ಫೋಟಗೊಂಡಿರುವ ಸ್ಥಳದಲ್ಲಿ ಇನ್ನಷ್ಟು ಸ್ಫೋಟಕ ವಸ್ತುಗಳು ಜೀವಂತವಿರುವ ಬಗ್ಗೆ ಶಂಕೆ ಇದ್ದು, ಘಟನಾ ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಸುತ್ತಲೂ ಪೊಲೀಸ್‌ ಸರ್ಪಗಾವಲು ಇದ್ದು ಮಾಧ್ಯಮದವರಿಗೂ ಒಳಹೋಗಲು ನೀಡಲಾಗಿಲ್ಲ.

ಇದನ್ನೂ ಓದಿ:ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ

ಬಾಂಬ್‌ ನಿಷ್ಕ್ರಿಯ ದಳವು ಬೆಂಗಳೂರು ಮತ್ತು ಮಂಗಳೂರಿನಿಂದ ಬರಲಿದ್ದು ಬಳಿಕವೇ ಮುಂದಿನ ಕಾರ್ಯಾಚರಣೆ ನಡೆಸಲಾಗುತ್ತದೆ. ಅವರ ಪರಿಶೀಲನೆ ಬಳಿಕ, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಮೆಡಿಕಲ್ ಟೀಂ ಶೋಧ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

Advertisement

ಇದನ್ನೂ ಓದಿ: ಶಿವಮೊಗ್ಗ ಸ್ಫೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ, ತನಿಖೆಗೆ ಎಚ್ ಡಿಕೆ ಆಗ್ರಹ

ಭಾರಿ ಪ್ರಮಾಣದ ಸ್ಫೋಟಕ ತಂದಿರುವ ಹಿನ್ನೆಲೆಯಲ್ಲಿ, ಅವೆಲ್ಲವು ರಾತ್ರಿಯೇ ಸ್ಫೋಟಗೊಂಡಿರಬಹುದು. ಒಂದು ವೇಳೆ ಕೆಲವು ಸ್ಫೋಟಕಗಳು ಸಜೀವ ಸ್ಥಿತಿಯಲ್ಲಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲಿಸಿದ ಬಳಿಕ ಮುಂದಿನ ಕಾರ್ಯಾಚರಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next