Advertisement

ಪ್ಲಾಸ್ಟಿಕ್‌ ಮುಕ್ತ ದೇಶವಾಗಲಿ: ಡಿಸಿ

04:15 PM Jun 06, 2019 | Team Udayavani |

ಶಿವಮೊಗ್ಗ: ದೇಶದ ಪ್ರತಿಯೊಬ್ಬ ಪ್ರಜೆಯು ಪರಿಸರ ರಕ್ಷಣೆಗೆ ಪಣ ತೊಟ್ಟು ಕಾರ್ಯ ನಿರ್ವಹಿಸಿದಾಗ ಮಾತ್ರ ಈಗಿರುವ ಅರಣ್ಯ ಸಂಪತ್ತನ್ನು ರಕ್ಷಿಸಿಕೊಂಡು ಗಿಡಗಳನ್ನು ಬೆಳೆಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಹೇಳಿದರು.

Advertisement

ನಗರದ ಹೊರವಲಯದ ಮುದ್ದಿನಕೊಪ್ಪ ಟ್ರೀ ಪಾರ್ಕ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಪರಿಸರ ಸಂರಕ್ಷಣೆ ಕಾರ್ಯಕ್ರಮ ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲಾಡಳಿತದಿಂದ ಅನೇಕ ಪರಿಸರ ಕುರಿತಾದ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ಜನರು ಇವುಗಳಿಂದ ತಿಳುವಳಿಕೆ ಮೂಡಿಸಿಕೊಂಡು ಪರಿಸರ ರಕ್ಷಣೆಯೊಂದಿಗೆ ಪ್ಲಾಸ್ಟಿಕ್‌ ಮುಕ್ತವಾದ ಜಿಲ್ಲೆ ಹಾಗೂ ದೇಶ ನಿರ್ಮಾಣ ಮಾಡಬೇಕಿದೆ ಎಂದು ಅವರು ಹೇಳಿದರು.

ಪರಿಸರ ನಾಶದಿಂದ ಆಗುತ್ತಿರುವ ಪರಿಣಾಮ ಜಿಲ್ಲೆಯ ಮೇಲೂ ಬೀರಿದ್ದು ಈಗಾಗಲೇ ತಾಪಮಾನದಲ್ಲಿ ಹೆಚ್ಚಳ, ನೀರಿನ ಅಭಾವ ಕಂಡುಬಂದಿದೆ. ಇನ್ನಾದರು ಜನತೆ ಎಚ್ಚೆತ್ತುಕೊಳ್ಳದೆ ಹೋದರೆ ಇದಕ್ಕಿಂತಲೂ ಅಪಾಯದ ಸ್ಥಿತಿಗೆ ತಲುಪಲಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.ಶೇ. 22ರಷ್ಟಿರುವ ಅರಣ್ಯ ಪ್ರದೇಶವನ್ನು ಹೆಚ್ಚಿಗೆ ಮಾಡಲು ಇಂದು ಸಾಧ್ಯವಿಲ್ಲ. ಆದರೆ ಮನೆಯ ಸುತ್ತಮುತ್ತ, ರಸ್ತೆಗಳ ಅಕ್ಕ-ಪಕ್ಕ ಗಿಡಗಳನ್ನು ಬೆಳೆಸುವ ಮೂಲಕ ಇರುವ ಪ್ರದೇಶಗಳನ್ನ ಹಸಿರುಗೊಳಿಸಬಹುದು ಎಂದರು.

ನಂತರ ಜಿಲ್ಲೆಯ ಪರಿಸರ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ಎ.ಎಸ್‌. ಚಂದ್ರಶೇಖರ ಮಾತನಾಡಿ, ಪ್ರತಿ ಆರು ನಿಮಿಷಕ್ಕೆ ಆರು ಟ್ರಕ್‌ ಲೋಡಿನಷ್ಟು ಪ್ಲಾಸ್ಟಿಕ್‌ ಸಮುದ್ರ ಸೇರುತ್ತಿದೆ. ಇದರಲ್ಲಿ ನಮ್ಮ ಪಾಲು ಇದ್ದು ಎಚ್ಚರಿಕೆ ವಹಿಸಬೇಕು ಎಂದರು. ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮs್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸಲು, ಜಿಪಂ ಸಿಇಒ ಶಿವರಾಮೇ ಗೌಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್‌., ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಎಸ್‌. ಮರಿಯಪ್ಪ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next