Advertisement

Gangavathi; ಕುತೂಹಲ ಮೂಡಿಸಿದ ಗಾಲಿ ಜನಾರ್ದನ ರೆಡ್ಡಿ-ಶಿವನಗೌಡ ನಾಯಕ್ ಭೇಟಿ

08:37 PM Jan 10, 2024 | Team Udayavani |

ಗಂಗಾವತಿ: ಗಂಗಾವತಿಯ ಶಾಸಕ ,ಕೆ ಆರ್ ಪಿ ಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಗಂಗಾವತಿ ನಿವಾಸದಲ್ಲಿ ರಾಯಚೂರಿನ ಪ್ರಭಾವಿ ರಾಜಕೀಯ ಮುಖಂಡರು ಮತ್ತು ಮಾಜಿ ಸಚಿವರಾದ ಬಿಜೆಪಿಯ ಶಿವನಗೌಡ ನಾಯಕ್ ಭೇಟಿಯಾಗಿ ಒಂದು ತಾಸಿಗೂ ಹೆಚ್ಚು ಚರ್ಚೆ ನಡೆಸಿದ್ದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

Advertisement

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿ ಹಾಗೂ ಸಂಗಡ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಬಿಜೆಪಿಯ ಕೆಲ ಹಿರಿಯ ಮುಖಂಡರು ರೆಡ್ಡಿ ಅವರನ್ನು ಬಿಜೆಪಿ ಪಕ್ಷಕ್ಕೆ ಮರಳಿ ಆಹ್ವಾನಿಸುವ ಇರಾದೆಯಲ್ಲಿ ಇರುವುದರಿಂದ ರೆಡ್ಡಿ,  ಶಿವನಗೌಡ ನಾಯಕ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಪ್ರಥಮವಾಗಿ ಅಧಿಕಾರಕ್ಕೆ ಬರಲು ಗಾಲಿ ಜನಾರ್ದನ ರೆಡ್ಡಿ ಪ್ರಮುಖ ಕಾರಣರಾಗಿದ್ದು ಇವರ ಅವಧಿಯಲ್ಲಿಯೇ ಶಿವನಗೌಡ ನಾಯಕ್ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿ ಸಚಿವರಾಗಿದ್ದರು .ನಂತರ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಪ್ರವರ್ತಮಾನಕ್ಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ರೆಡ್ಡಿ ಹಾಗೂ ನಾಯಕ್ ಭೇಟಿ ಮಹತ್ವ ಪಡೆದುಕೊಂಡಿದೆ ಎನ್ನಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next