Advertisement

Vijayapura; ಸ್ವಂತ ಬಲದ ಶಕ್ತಿ ಇಲ್ಲದ್ದಕ್ಕೆ ಆಪರೇಷನಕ್ ಕಮಲ: ಶಿವಾನಂದ ಪಾಟೀಲ

12:48 PM Aug 31, 2024 | keerthan |

ವಿಜಯಪುರ: ರಾಜ್ಯದಲ್ಲಿ ಈ ಹಿಂದೆ ಎರಡು ಬಾರಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷಕ್ಕೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ. ಹೀಗಾಗಿ ಆಪರೇಷನ್ ಕಮಲ ಎಂಬುದು ಹೊಸತೇನಲ್ಲ, ಈಗಲೂ ಅಂತಹ ಪ್ರಯತ್ನ ನಡೆಸಿದ್ದಾರೆ ಎಂದು ಜವಳಿ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಕಿಡಿಕಾರಿದರು.

Advertisement

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಹಗರಣದ ಆರೋಪ ಹೊರಿಸಿ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲನ ನಡೆ ಸಮರ್ಥನೀಯವಲ್ಲ. ಎರಡು ಬಾರಿ ಹಿಂಬಾಗಿಲಿನಿಂದ ಅಧಿಕಾರ ಹಿಡಿದಿರುವ ಬಿಜೆಪಿ, ಮತ್ತದೇ ಪ್ರಯತ್ನ ನಡೆಸಿದೆ ಆಕ್ಷೇಪ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಇಂದು ರಾಜಭವನ ಚಲೋ ಹೋರಾಟದಲ್ಲಿ ನಾನೂ ಹಾಜರಾಗಬೇಕಿತ್ತು. ಆದರೆ ಆರ್‍ಬಿಐ ನಿಯಮದ ಪ್ರಕಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯುತ್ತಿರುವ ಕಾರಣ ಅನುಮತಿ ಪಡೆದು ವಿಜಯಪುರಕ್ಕೆ ಬಂದಿದ್ದೇನೆ ಎಂದರು.

ಇದಕ್ಕೂ ಮೊದಲಿನ ಹಲವು ಪ್ರಕರಣಗಳ ಅರ್ಜಿ ರಾಜ್ಯಪಾಲರ ಮುಂದಿದ್ದರೂ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರ ಮೂಲಕ ರಾಜಭವದ ದುರ್ಬಳಕೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ. ರಾಜ್ಯಪಾಲರ ಮುಂದೆ ಹಲವು ಕಡತಗಳು ಬಾಕಿ ಇದ್ದು, ಮೊದಲು ಅಂಥ ಆರೋಪದ ಪ್ರಕರಣದ ಕುರಿತು ತೀರ್ಮಾನವಾಗಲಿ. ಆದರೆ ಈಗಷ್ಟೇ ನೀಡಿದ ದೂರಿನ ಕುರಿತು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಸರಿಯಲ್ಲ ಎಂದು ಹರಿಹಾಯ್ದರು.

Advertisement

Udayavani is now on Telegram. Click here to join our channel and stay updated with the latest news.

Next