Advertisement

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

01:02 AM Sep 17, 2024 | Team Udayavani |

ಬೆಂಗಳೂರು: ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾಗಿದ್ದ ಕಾಳಿಂಗ ನಾವಡರ ನೆನಪಿನಲ್ಲಿ ನಗರದ ಕಲಾ ಕದಂಬ ಆರ್ಟ್‌ ಸೆಂಟರ್‌ ಪ್ರತಿವರ್ಷ ಕೊಡಮಾಡುವ ಕಾಳಿಂಗ ನಾವಡ ಪ್ರಶಸ್ತಿಗೆ ಈ ಬಾರಿ ಕೋಟ ಶಿವಾನಂದ ಆಯ್ಕೆಯಾಗಿದ್ದಾರೆ.

Advertisement

ಶಿವಾನಂದ ಅವರು 46 ವರ್ಷಗಳಿಂದ ಯಕ್ಷಗಾನದ ವೀರ ವಾದ್ಯವೆನಿಸಿದ ಚೆಂಡೆಯ ನುಡಿಸಾಣಿಕೆಯಲ್ಲಿ ನೈಪುಣ್ಯ ಸಾಧಿಸಿದ್ದಾರೆ. ಅ. 27ರಂದು ಚಾಮರಾಜಪೇಟೆಯಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಪ್ರಶಸ್ತಿಯು 10 ಸಾವಿರ ರೂ. ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಹೊಂದಿರುತ್ತದೆ ಎಂದು ಕಲಾಕದಂಬ ಆರ್ಟ್‌ ಸೆಂಟರ್‌ನ ನಿರ್ದೇಶಕ ಡಾ| ರಾಧಾಕೃಷ್ಣ ಉರಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next