Advertisement

ಪುನೀತ್ ಡ್ರೀಮ್ ಪ್ರಾಜೆಕ್ಟ್ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ ನೀಡಿದ ಶಿವಣ್ಣ

12:44 PM Dec 04, 2021 | Team Udayavani |

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ‘ಗಂಧದಗುಡಿ’ ಟೀಸರ್ ಬಿಡುಗಡೆಗೆ ನಟ ಶಿವರಾಜ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಿದರು.

Advertisement

ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ಶಿವರಾಜ್ ಕುಮಾರ್ ಆಗಮಿಸಿದರು. ಡಿಸೆಂಬರ್ 6 ರಂದು ಟೀಸರ್ ಬಿಡುಗಡೆಯಾಗಲಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ನವೆಂಬರ್ 1 ರಂದು ಗಂಧದಗುಡಿ ಟೀಸರ್ ಬಿಡುಗಡೆಯಾಗಬೇಕಿತ್ತು. ಇದೇ ವಿಚಾರವಾಗಿ ಸಿಎಂ ಭೇಟಿಗೆ ಪುನೀತ್ ರಾಜ್‌ಕುಮಾರ್ ಸಮಯ ಕೇಳಿದ್ದರು. ಆದರೆ ಪುನೀತ್ ರಾಜ್ ಕುಮಾರ್ ಹಠಾತ್ ನಿಧನದಿಂದ ಎಲ್ಲವೂ ಬುಡಮೇಲಾಗಿತ್ತು.

ಇದನ್ನೂ ಓದಿ:ಡಿ.6ಕ್ಕೆ ಪುನೀತ್‌ ರಾಜ್ ಕುಮಾರ್ ಡ್ರೀಮ್‌ ಪ್ರಾಜೆಕ್ಟ್ ಟೀಸರ್‌ ಬಿಡುಗಡೆ

ಇದೀಗ ಡಿಸೆಂಬರ್ 6 ರಂದು ಗಂಧದಗುಡಿ ಟೀಸರ್ ಬಿಡುಗಡೆ ಮಾಡಲು ಪಿಆರ್ ಕೆ ಪ್ರೊಡಕ್ಷನ್ ಸಿದ್ದವಾಗಿದೆ. ಶುಕ್ರವಾರ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಬಿಡುಗಡೆ ದಿನಾಂಕ ಘೋಷಿಸಿದ್ದರು.

Advertisement

ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಸಿಎಂ ಭೇಟಿ‌ ಮಾಡಿ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next