Advertisement

ಡಾ.ರಾಜ್‌ ಕುಮಾರ್‌ ಪುಣ್ಯಸ್ಮರಣೆ: ಸಮಾಧಿಗೆ ಪೂಜೆ ಸಲ್ಲಿಸಿದ ಶಿವಣ್ಣ

10:23 AM Apr 13, 2020 | mahesh |

ಏ.12 ವರನಟ ಡಾ.ರಾಜ್‌ ಕುಮಾರ್‌ ಅವರ ಪುಣ್ಯಸ್ಮರಣೆ ದಿನವಾಗಿದ್ದು, ಶಿವರಾಜ್‌ ಕುಮಾರ್‌ ಅವರು ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು. ವರನಟ ಡಾ.ರಾಜ್‌ ಕುಮಾರ್‌ ಚಿತ್ರರಂಗವನ್ನು ಅಗಲಿ 14 ವರ್ಷಗಳೇ ಸಂದಿವೆ. ಕೋವಿಡ್ -19 ಸೋಂಕು ಈ ಬಾರಿ ರಾಜ್‌ ಕುಮಾರ್‌ ಪುಣ್ಯಸ್ಮರಣೆಗೂ ತಟ್ಟಿದ್ದು, ಪ್ರತಿವರ್ಷ ಸಾವಿರಾರು ಅಭಿಮಾನಿಗಳು ರಾಜ್‌ ಕುಟುಂಬದ ಸದಸ್ಯರೆಲ್ಲ ಒಟ್ಟಿಗೆ ಸೇರಿ ರಾಜ್‌ ಸಮಾಧಿಗೆ ತೆರಳಿ ಪೂಜೆ ನಮನ ಸಲ್ಲಿಸುತ್ತಿದ್ದರು. ಆದರೆ ಈ ವರ್ಷ ವರನಟನ ಪುಣ್ಯಸ್ಮರಣೆಗೂ ಕರಾಳ ಛಾಯೆ ಆಚರಿಸಿದೆ. 14ನೇ ಪುಣ್ಯಸ್ಮರಣೆಯಾದ ಭಾನುವಾರ ಬೆಳಿಗ್ಗೆ ರಾಜ್‌ ಕುಮಾರ್‌ ಹಿರಿಯ ಪುತ್ರ ಚಂದನವನದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಒಬ್ಬರೇ ತಂದೆಯ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದರು.

Advertisement

ಈ ವೇಳೆ ಮಾತನಾಡಿದ ಶಿವರಾಜ್‌ ಕುಮಾರ್‌, ನಾವು ಅಪ್ಪಾಜಿ ಇಲ್ಲ ಎಂದು ಅಂದುಕೊಂಡಿಲ್ಲ. ಅವರ ಕಣ್ಣುಗಳು ಜಗತ್ತನ್ನು ನೋಡುತ್ತಿವೆ. ಲಾಕ್‌ಡೌನ್‌ ಆಗಿದ್ದರಿಂದ ಎಲ್ಲರೂ ಬರದೇ ಕೆಲವರು ಅಪ್ಪಾಜಿ ಸಮಾಧಿಗೆ ಬಂದು ನಮಸ್ಕರಿಸಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಕೋವಿಡ್ -19 ವೈರಸ್‌ ಮಹಾಮಾರಿ ತಡೆಗೆ ಸಾಮಾಜಿಕ ಅಂತರವೇ ಮದ್ದು ಎಂದಿರುವ ಶಿವರಾಜಕುಮಾರ್‌, ಯಾರು ಹೆಚ್ಚಾಗಿ ಸೇರಬೇಡಿ. ಜನರು ಸಹಕಾರ ಕೊಟ್ಟರೆ ಅದಷ್ಟು ಬೇಗ ಕೋವಿಡ್ -19 ಮಹಾಮಾರಿಯಿಂದ ಮುಕ್ತಿ ಪಡೆಯಬಹುದು. ಸಿನಿಮಾ ಇಂಡಸ್ಟಿಯಿಂದ ಯಾರು ಕೂಡ ಇಲ್ಲಿಯ ತನಕ ಕಷ್ಟ ಅಂತ ಸಂಪರ್ಕ ಮಾಡಿಲ್ಲ. ಲಾಕ್‌ಡೌನ್‌ ತಿಳಿಗೊಂಡ ನಂತರ ಸಿನಿಮಾ ಯೂನಿಟ್‌ ಅವರನ್ನ ಸಂಪರ್ಕ ಮಾಡಿ ಸಹಾಯ ಮಾಡುತ್ತೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next