Advertisement

ಅಭಿಮಾನದಿಂದ ಪ್ರೀತಿ ತೋರಿ; ದ್ವೇಷ ಅಗೌರವವನ್ನಲ್ಲ: ಹೊಸಪೇಟೆ ಘಟನೆ ಬಗ್ಗೆ ಶಿವಣ್ಣ

02:29 PM Dec 19, 2022 | Team Udayavani |

ಬೆಂಗಳೂರು: ಹೊಸಪೇಟೆಯಲ್ಲಿ ʼಕ್ರಾಂತಿʼ ಸಿನಿಮಾದ ಆಡಿಯೋ ಬಿಡುಗಡೆ ವೇಳೆ ನಡೆದ ಕೃತ್ಯವನ್ನು ಚಂದನವನ ಖಂಡಿಸಿದೆ.

Advertisement

ಸ್ಯಾಂಡಲ್‌ ವುಡ್‌ ನ ಹಿರಿಯ ನಟ ಶಿವರಾಜ್‌ ಕುಮಾರ್‌ ಅವರು ವಿಡಯೋ ಮಾಡಿ ದರ್ಶನ್‌ ಅವರ ಮೇಲೆ ನಡೆದ ಘಟನೆಯನ್ನು ಖಂಡಿಸಿದ್ದಾರೆ.

ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ ಎಂದಿದ್ದಾರೆ.

ಹೊಸಪೇಟೆಯಲ್ಲಿ ಆಡಿಯೋ ರಿಲೀಸ್‌ ವೇಳೆ ಯಾರೋ ಕಿಡಿಕೇಡಿಗಳು ದರ್ಶನ್‌ ಅವರ ಚಪ್ಪಲಿ ಎಸೆದಿದ್ದಾರೆ. ತರಾತುರಿಯಲ್ಲಿ ಚಿತ್ರ ತಂಡ ಆಡಿಯೋ ಬಿಡುಗಡೆ ಮಾಡಿದೆ. ಕೆಲ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಲಾಠಿ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next