Advertisement

‘ನಾನ್‌ ವೈಲೆನ್ಸ್‌’ಗೆ ಶಿವಣ್ಣ ಸಾಥ್‌

05:50 PM Jun 01, 2024 | Team Udayavani |

ತಮಿಳಿನ ಮೆಟ್ರೋ ಖ್ಯಾತಿಯ ನಿರ್ದೇಶಕ ಆನಂದ್‌ ಕೃಷ್ಣನ್‌ ನಿರ್ದೇಶನದ “ನಾನ್‌ ವೈಲೆನ್ಸ್‌’ ಸಿನಿಮಾಗೆ ನಟ ಶಿವರಾಜ್‌ ಕುಮಾರ್‌ ಸಾಥ್‌ ಕೊಟ್ಟಿದ್ದಾರೆ. ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆ ಮಾಡಿ ಶಿವಣ್ಣ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

Advertisement

ಮೆಟ್ರೋ ಶಿರೀಶ್‌, ಬಾಬಿ ಸಿಂಹ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸುತಿದ್ದು, ಅದಿತಿ ಬಾಲನ್‌, ಗರುಡ ರಾಮ್, ಆದಿತ್ಯ ಕಥಿರ್‌ ತಾರಾಬಳಗದಲ್ಲಿದ್ದಾರೆ.

90ರ ದಶಕದಲ್ಲಿ ಮಧುರೈ ಜೈಲಿನೊಳಗೆ ಸಂಭವಿಸುವ ಘಟನೆಗಳ ಸುತ್ತ ಪ್ರಧಾನವಾಗಿ ಸುತ್ತುವ ಒಂದು ಆಕರ್ಷಕ ಚಿತ್ರಕಥೆಯನ್ನು ಆನಂದ್‌ ರಚಿಸಿದ್ದಾರೆ.

“ಮೆಟ್ರೋ’ ಮತ್ತು ‘ಕೊಡಿಯಲ್ಲಿ ಒರುವನ್’ ಚಿತ್ರಗಳ ಸತತ ಗೆಲುವಿನ ನಂತರ ನಿರ್ದೇಶಕ ಆನಂದ ಕೃಷ್ಣನ್‌ ಈ ಚಿತ್ರದ ಮೂಲಕ ಹ್ಯಾಟ್ರಿಕ್‌ ಯಶಸ್ಸನ್ನು ತಮ್ಮದಾಗಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next