Advertisement

ಕೆಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

11:31 PM Apr 03, 2021 | Team Udayavani |

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್‌. ಸಾಹು ಕಾರ್‌ ಅವರನ್ನು ನೇಮಕ ಮಾಡಲಾಗಿದೆ.

Advertisement

ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ.

ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ.

ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್‌ ಪದವಿ ಪಡೆದ ಬಳಿಕ 12 ವರ್ಷಗಳ ಕಾಲ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ :ಆರೋಗ್ಯದಲ್ಲಿ ಚೇತರಿಕೆ : ರಾಷ್ಟ್ರಪತಿ ಐಸಿಯುನಿಂದ ವಿಶೇಷ ವಾರ್ಡ್‌ಗೆ ಶಿಫ್ಟ್

Advertisement
Advertisement

Udayavani is now on Telegram. Click here to join our channel and stay updated with the latest news.

Next