Advertisement

ಶಿವಮೊಗ್ಗ ಜಿ.ಪಂ.ಬೈ ಎಲೆಕ್ಷನ್‌; ಕೈ ಅಭ್ಯರ್ಥಿಗೆ ಭರ್ಜರಿ ಗೆಲುವು

10:40 AM Oct 31, 2018 | Team Udayavani |

ಶಿವಮೊಗ್ಗ: ಲೋಕಸಭಾ ಉಪಚುನಾವಣೆಗೂ ಮುನ್ನ ಬಿಜೆಪಿ ಆಘಾತ ಅನುಭವಿಸಿದ್ದು, ಜಿಲ್ಲಾ ಪಂಚಾಯತ್‌ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಜಯ ಸಾಧಿಸಿದ್ದಾರೆ. 

Advertisement

ಸಾಗರ ತಾಲೂಕಿನ ಆವಿನಹಳ್ಳಿ ಜಿಲ್ಲಾ ಪಂಚಾಯತ್‌ ಕ್ಷೇತ್ರಕ್ಕೆ  ಕಾಂಗ್ರೆಸ್‌ ಸದಸ್ಯ ಕಾಗೋಡು ಅಣ್ಣಾಜಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆದಿತ್ತು. ಬುಧವಾರ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಭೀಮನೇರಿ ಶಿವಪ್ಪ ಅವರು ಶಾಸಕ ಹರತಾಳು ಹಾಲಪ್ಪ  ಅವರ ಸಹೋದರನ ಪುತ್ರ ಬಿ.ಟಿ.ರವಿ ಅವರನ್ನು 530 ಮತಗಳ ಅಂತರದಿಂದ ಸೋಲಿಸಿದ್ದಾರೆ.

ನವೆಂಬರ್‌ 3 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ , ಮಾಜಿ ಸಂಸದ ಬಿ.ವೈ .ರಾಘವೇಂದ್ರ ಮತ್ತು ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಅವರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ. 

Advertisement

Udayavani is now on Telegram. Click here to join our channel and stay updated with the latest news.

Next