Advertisement

ಶೋಭಾಗೆ ಪರಿವರ್ತನಾ ಯಾತ್ರೆ ಉಸ್ತುವಾರಿ

09:45 AM Oct 07, 2017 | Team Udayavani |

ಬೆಂಗಳೂರು: ಕರ್ನಾಟಕ ನವನಿರ್ಮಾಣದ ಸಂಕಲ್ಪದೊಂದಿಗೆ ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಗೆ ಸಂಸದೆ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಅವರಿಗೆ ಮತ್ತಷ್ಟು ಜವಾಬ್ದಾರಿ ನೀಡಿದಂತಾಗಿದೆ.

Advertisement

ಕರ್ನಾಟಕ ನವ ನಿರ್ಮಾಣ ಪರಿವರ್ತನಾ ಯಾತ್ರೆ ಎರಡು ಭಾಗದಲ್ಲಿ ನಡೆಯಲಿದೆ. ರಾಜ್ಯದ ದಕ್ಷಿಣ ಭಾಗದ ಪರಿವರ್ತನಾ ಯಾತ್ರೆ ನ.2ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದಾದ ನಂತರ ಉತ್ತರ ಕರ್ನಾಟಕ ಭಾಗದ ಪರಿವರ್ತನಾ ಯಾತ್ರೆ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಈ ಎರಡೂ ಯಾತ್ರೆಯ ಉಸ್ತುವಾರಿಯನ್ನು ಶೋಭಾ ಅವರ ಹೆಗಲಿಗೆ ಏರಿಸಲಾಗಿದೆ.

ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರದ ವಿರುದ್ಧ ಸದಾ ಟೀಕೆ, ವಾಗ್ಧಾಳಿ ಮಾಡಿಕೊಂಡು ಬರುತ್ತಿರುವ ಶೋಭಾ ಅವರು ಇತ್ತೀಚೆಗಷ್ಟೆ ಸರ್ಕಾರದ ಭ್ರಷ್ಟಾಚಾರದ ಕುರಿತು ದಾಖಲೆ ಸಮೇತ ಗಂಭೀರ ಆರೋಪ ಮಾಡಿದ್ದರು. ಅವರ ಕಾರ್ಯವೈಖರಿ ಗಮನಿಸಿ ರಾಜ್ಯ ಬಿಜೆಪಿ ಅವರಿಗೆ ಮತ್ತಷ್ಟು ಜವಾಬ್ದಾರಿ ನೀಡಿದೆ. 

ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಯಾತ್ರೆಯನ್ನು ಯಶಸ್ಸುಗೊಳಿಸಿದರೆ, ಪಕ್ಷದ ವಲಯದಲ್ಲಿ ಅವರ ವರ್ಚಸ್ಸು ಇನ್ನಷ್ಟು ಹೆಚ್ಚಲಿದೆ. ಜೊತೆಗೆ, ಯಾತ್ರೆಯ ಯಶಸ್ಸಿಗಾಗಿ ಜಿಲ್ಲಾ ಮತ್ತು ಕ್ಷೇತ್ರಮಟ್ಟದಲ್ಲಿ ಪ್ರಮುಖರನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next