Advertisement

ಸಿಎಂ ಸಿದ್ದರಾಮಯ್ಯ ಅವರದ್ದು ಕಾಮ್ ಕೀ ಅಲ್ಲ, ಲೂಟ್ ಕೀ ಬಾತ್: ಶೋಭಾ

12:55 PM Oct 04, 2017 | Team Udayavani |

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಿರ್ಮಾಣದಲ್ಲಿ ಕೋಟಿ, ಕೋಟಿ ರೂಪಾಯಿ ಗೋಲ್ ಮಾಲ್ ನಡೆದಿದೆ, ಇಂದಿರಾ ಕ್ಯಾಂಟೀನ್ ನಿರ್ಮಾಣದ ಗುತ್ತಿಗೆ ತಮಿಳುನಾಡಿನವರಿಗೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯನವರದ್ದು ಕಾಮ್ ಕೀ ಬಾತ್ ಅಲ್ಲ, ಲೂಟ್ ಕೀ ಬಾತ್ ಬಗ್ಗೆ ಹೇಳಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

Advertisement

ಬಿಬಿಎಂಪಿ, ಬಿಡಿಎದಲ್ಲಿ ಹಣ ಲೂಟಿ ಮಾಡಲಾಗಿದೆ. ಇಂದಿರಾ ಕ್ಯಾಂಟೀನ್ ಯೋಜನೆಯಲ್ಲೂ ಕೋಟಿ, ಕೋಟಿ ಗೋಲ್ ಮಾಲ್ ಮಾಡಲಾಗಿದೆ. ಹೀಗಾಗಿ ಸಿಎಂ ಅವರದ್ದು ಕಾಮ್ ಕೀ ಬಾತ್ ಅಲ್ಲ, ಲೂಟ್ ಕೀ ಬಾತ್ ಎಂದು ದೂರಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ದೂರ ಇಟ್ಟಿದ್ದಾರೆ, ಪರಮೇಶ್ವರ್ ಅವರನ್ನು ಓಡಿಸಿದ್ದಾರೆ. ಪ್ರಿಯಾಂಕಾ ಖರ್ಗೆಗೆ ಸ್ಥಾನ ನೀಡುವ ಮೂಲಕ ಖರ್ಗೆ ಅವರನ್ನು ದೂರ ಇರುವಂತೆ ಮಾಡಿದ್ದಾರೆ ಎಂದು ಹೇಳಿದರು.

ಎಲ್ಲರನ್ನೂ ದೂರ ಮಾಡಿ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.

ನಾವು ಒತ್ತಾಯಿಸಿರುವ ಪ್ರಕರಣಗಳನ್ನು ಸಿಬಿಐಗೆ ರಾಜ್ಯ ಸರ್ಕಾರ ವಹಿಸುತ್ತಿಲ್ಲ, ನಾವು ಆರ್ ಟಿಐ ಅಡಿ ಕೇಳಿದ ಮಾಹಿತಿಯನ್ನು ನೀಡಲು ರಾಜ್ಯ ಸರ್ಕಾರ ನಿರಾಕರಿಸುತ್ತಿದೆ ಎಂದು ಶೋಭಾ ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next