Advertisement

#Gobackshobha; ‘ಗಂಡಸರಲ್ಲೊಂದು ಮನಸ್ಥಿತಿಯಿದೆ..’; ಗೋಬ್ಯಾಕ್ ಅಭಿಯಾನಕ್ಕೆ ಶೋಭಾ ಗರಂ

12:04 PM Feb 26, 2024 | Team Udayavani |

ಚಿಕ್ಕಮಗಳೂರು: ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ನಮ್ಮಲ್ಲೇ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ಗೋಬ್ಯಾಕ್ ಶೋಭಾ ಅಭಿಯಾನ ಮಾಡಿಸಿದ್ದಾರೆ. ಕಳೆದ ಚುನಾವಣೆಯಲ್ಲೂ ಮಾಡಿಸಿದ್ದರು. ಇದಕ್ಕೆ ಹೈಕಮಾಂಡ್ ಸರಿಯಾದ ಉತ್ತರ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಗುಡುಗಿದರು.

Advertisement

ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನನ್ನ ವಿರುದ್ದ ಕಳೆದ ಚುನಾವಣೆಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ.  ಹೈಕಮಾಂಡ್ ನನಗೆ ಯಾವ ಜವಬ್ದಾರಿ ನೀಡಿದೆಯೋ ಅದನ್ನು ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ ಮಾಡಿದರೂ ಉತ್ತರ ನಾನು ಕೊಡಲ್ಲ. ಹೈಕಮಾಂಡ್, ಹಿರಿಯರು ಕೊಡುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು.

ಪತ್ರ ಯಾರು ಬರೆದರು, ಯಾರದ್ದು ಹ್ಯಾಂಡ್ ರೈಟಿಂಗ್, ಯಾರು ಪೋಸ್ಟ್‌ ಮಾಡಿದರು, ಎಷ್ಟು ಪೋಸ್ಟ್‌ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ ಎಂಬ ವಿಶ್ವಾಸವಿದೆ ಎಂದರು.

ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ಗೊತ್ತಿದೆ. ಅವರ ಶಾಸಕರನ್ನು ಉಳಿಸಿಕೊಳ್ಳಲು ಆಗಲ್ಲ ಎಂದು ಬಿಜೆಪಿ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಾದ ಮೇಲೆ ಎಲ್ಲವೂ ಆಚೆ ಬರುತ್ತದೆ. ಕಾಂಗ್ರೆಸ್ ಆಂತರಿಕ ರಾಜಕೀಯದ ಬಗ್ಗೆ ನಾನೂ ಕಮೆಂಟ್ ಮಾಡಲ್ಲ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಡುವೆ ಏನು ನಡೆಯುತ್ತಿದೆ ಎಂದು ಚುನಾವಣೆ ಬಳಿಕ ಆಚೆಗೆ ಬರುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next