Advertisement

ಸಿದ್ದರಾಮಯ್ಯ ಅಂದ್ರೆ ಸುಳ್ಳು; ಸುಳ್ಳು ಅಂದ್ರೆ ಸಿದ್ದರಾಮಯ್ಯ: ಶೋಭಾ

09:59 AM Nov 04, 2019 | Team Udayavani |

ಚಿಕ್ಕಮಗಳೂರು: ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ತನ್ನದು ಎನ್ನುತ್ತಾರೆ. ಅದು ಕೇಂದ್ರ ಸರ್ಕಾರದ ಯೋಜನೆ. ಕೇಂದ್ರದ ಯೋಜನೆಯನ್ನು ನನ್ನದು ಎಂದು ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ಓಡಾಡ್ತಿದ್ದಾರೆ ಎಂದು ಸಂಸದೆ ಶೋಭಾ ಕರಾಂದ್ಲಾಜೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ,  ಸಿದ್ದರಾಮಯ್ಯ ಅಂದ್ರೆ ಸುಳ್ಳು; ಸುಳ್ಳು ಅಂದ್ರೆ ಸಿದ್ದರಾಮಯ್ಯ. ಅವರದು ಸ್ವಂತ ಸಾಧನೆ ಏನು ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಧಃಪತನಕ್ಕೆ ಸಿದ್ದರಾಮಯ್ಯ ಕೊಡುಗೆ ಅಪಾರ. ಅದಕ್ಕಾಗಿ ನಾವು ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕು ಎಂದ ಅವರು  ಸಿದ್ದರಾಮಯ್ಯ ಭಾರಿ ಭ್ರಮಯಲ್ಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಃಪತನದಲ್ಲಿದೆ ಎಂದರು.

ಸಿದ್ದರಾಮಯ್ಯನವರು ಬ್ಲಾಕ್ ಮೇಲ್ ಮಾಡಿ ವಿರೋಧ ಪಕ್ಷದ ಸ್ಥಾನ ಗಿಟ್ಟಿಸಿದ್ದಾರೆ. ಈಗ  ಏನೋ ಮಾತನಾಡಬೇಕು ಸುಮ್ನೆ ಮಾತಾಡ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next