Advertisement

ನಾಳೆ ಶೋಭಾ ನಾಮಪತ್ರ: ಸಚಿವೆ ನಿರ್ಮಲಾ ಭಾಗಿ

01:19 AM Mar 25, 2019 | Team Udayavani |

ಉಡುಪಿ: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಉಪಸ್ಥಿತರಿರುವರು.

Advertisement

ನಿರ್ಮಲಾ ಅವರು ಮಂಗಳವಾರ ಬೆಳಗ್ಗೆ 9.30ಕ್ಕೆ ಚಾರ್ಟರ್ಡ್‌ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.15ಕ್ಕೆ ಕಡಿಯಾಳಿ ಬಿಜೆಪಿ ಕಚೇರಿ ಎದುರು ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಸುಮಾರು 12.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶೋಭಾ ಕರಂದ್ಲಾಜೆ ಅವರು ನಾಮಪತ್ರ ಸಲ್ಲಿಸುವಾಗ ಜತೆಗಿರುತ್ತಾರೆ. ಮಲ್ಪೆ ಮೀನುಗಾರರ ಜತೆಗೂ ಮಾತುಕತೆ ನಡೆಸುವರು.

ಮಾ. 26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು ಮಾ.27 ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದೆಗೆದುಕೊಳ್ಳಲು ಮಾ.29 ಕೊನೆಯ ದಿನಾಂಕವಾಗಿದ್ದು ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ವಿವರ ಲಭ್ಯವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next