Advertisement

ಹಣಕ್ಕಾಗಿ ತಂಗಿಯನ್ನೇ ಹತ್ಯೆಗೈದ

12:38 PM Jan 18, 2022 | Team Udayavani |

ದೊಡ್ಡಬಳ್ಳಾಪುರ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಡಹುಟ್ಟಿದ ತಂಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ, ಅಣ್ಣನೇ ಹತ್ಯೆ ಮಾಡಿರುವ ಘಟನೆ ತಾಲೂಕಿನ ಗುಂಡ್ಲಹಳ್ಳಿ ಬಳಿಯ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

Advertisement

ಮೃತ ಮಹಿಳೆಯನ್ನು ಸುಶೀಲಮ್ಮ(40) ಎಂದು ಗುರುತಿಸಲಾಗಿದ್ದು,ಜಮೀನು ಮಾರಿದ್ದ ಹಣದ ವಿಚಾರವಾಗಿ ಅಣ್ಣ-ತಂಗಿಯ ನಡುವೆ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.

ಮೃತಳ ಅಣ್ಣ ನಾಗರಾಜ್‌ (45) ಎನ್ನುವವರು ಕಲ್ಲು ಎತ್ತಿಹಾಕಿ ಹತ್ಯೆಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿದೂರು ದಾಖಲಾಗಿದೆ. ಆರೋಪಿ ನಾಗರಾಜ್‌ನನ್ನು ಬಂಧಿಸಲಾಗಿದೆ.

ಸ್ಥಳಕ್ಕೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್‌, ದೊಡ್ಡಬೆಳವಂಗಲ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಜ್ಞಾನಮೂರ್ತಿ ಸ್ಥಳ ಪರಿಶೀಲನೆನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next