Advertisement

ಬೈರಸಂದ್ರ ಕಾರ್ಪೊರೇಟರ್‌ಗೆ ಶೋಕಾಸ್‌ ನೋಟಿಸ್‌

11:35 AM Jun 16, 2018 | Team Udayavani |

ಬೆಂಗಳೂರು: ಬೈರಸಂದ್ರ ಪಾಲಿಕೆ ಸದಸ್ಯ ಎನ್‌.ನಾಗರಾಜುಗೆ ಬಿಜೆಪಿ ನಗರ ಘಟಕ ಶುಕ್ರವಾರ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. “ಜಯನಗರ ಉಪ ಚುನಾವಣೆ ವೇಳೆ ನೀವು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಪಕ್ಷ ವಿರೋಧಿ ಕಾರ್ಯದಲ್ಲಿ ಭಾಗಿಯಾಗಿದ್ದೀರ.

Advertisement

ಹೀಗಾಗಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು’ ಎಂದು ಕೇಳಿ ನೋಟಿಸ್‌ ಜಾರಿಗೊಳಿಸಿ, ಏಳು ದಿನಗಳಲ್ಲಿ ಉತ್ತರಿಸುವಂತೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಪಿ.ಎನ್‌.ಸದಾಶಿವ ಸೂಚಿಸಿದ್ದಾರೆ. ಜಯನಗರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಡಿಮೆ ಮತಗಳ ಅಂತರದಿಂದ ಸೋತಿದ್ದು, ನಾಗರಾಜು, ಕಾಂಗ್ರೆಸ್‌ ಪರ ಕೆಲಸ ಮಾಡಿದ್ದೇ ಇದಕ್ಕೆ ಕಾರಣ ಎಂಬ ಆರೋಪವಿದೆ.

Advertisement

Udayavani is now on Telegram. Click here to join our channel and stay updated with the latest news.

Next