Advertisement

Neha Hiremath Case: ಹಂತಕನನ್ನು ಗುಂಡಿಟ್ಟು ಕೊಲ್ಲಿ: ಕೆ.ಎಸ್‌.ಈಶ್ವರಪ್ಪ

11:14 PM Apr 20, 2024 | Shreeram Nayak |

ಶಿವಮೊಗ್ಗ,: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯ ಕೊಂದವನಿಗೆ ಕಠಿನ ಶಿಕ್ಷೆ ಆಗಬೇಕು. ಸರಕಾರ ಅವನನ್ನು ನೇಣಿಗೆ ಹಾಕಬೇಕು, ಅಥವಾ ಗುಂಡಿಟ್ಟು ಕೊಲ್ಲಬೇಕು. ಹಾಗೆ ಮಾಡಿದರೆ ಮಾತ್ರ ಹಿಂದೂಗಳಿಗೆ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್‌ ಸರಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದಾಗಿಯೇ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಆದರೆ ಹಿಂದೂ ಸಮಾಜ ಜಾಗೃತವಾದರೆ ಈ ಸರಕಾರ ಉಳಿಯದು ಎಂದರು.

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಹತ್ಯೆಯಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರಕಾರ ನಿರ್ಲಕ್ಷ್ಯ ದ ಉತ್ತರ ನೀಡುತ್ತಿದೆ. ರಾಜ್ಯದಲ್ಲಿ ಈ ರೀತಿಯ ದುರ್ಘ‌ಟನೆಗಳು ನಡೆದಾಗ ರಾಜ್ಯ ಸರಕಾರ ಹಿಂದೂ ವಿರೋಧಿ  ಎಂಬಂತೆ ವರ್ತಿಸುತ್ತಿದೆ. ಹಿಂದೂ ಸಮಾಜ ಹರಿಸುವ ಒಂದು ಹನಿ ರಕ್ತವೂ ನಿಮ್ಮ ಅಧಿ ಕಾರವನ್ನೇ ಕಿತ್ತುಕೊಳ್ಳಬಹುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ, ಬೆಂಗಳೂರು, ಚನ್ನಗಿರಿ ಪ್ರಕರಣವನ್ನು ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಎ.22ರಂದು ಬೆಳಗ್ಗೆ 10ಕ್ಕೆ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದೂ ತಿಳಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next