Advertisement

ಗಣೇಶ ಹಬ್ಬದಂದೇ ಬೆಂಗಳೂರಿನಲ್ಲಿ ಗುಂಡಿನ ದಾಳಿ: ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್

01:49 PM Aug 23, 2020 | keerthan |

ಬೆಂಗಳೂರು: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.

Advertisement

ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10ರ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ ಆಟೋ ಬಾಬು ಕಚೇರಿಯಲ್ಲಿ ದಾಳಿ ಮಾಡಲಾಗಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ತಡರಾತ್ರಿ 10 ಗಂಟೆಯ ಸುಮಾರಿಗೆ ಆಟೋ ಬಾಬು ಕಚೇರಿಯಲ್ಲಿ ಇದ್ದ ವೇಳೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬೀದರ್ ನಲ್ಲಿ ಮತ್ತೆ ನಾಲ್ವರು ಕೋವಿಡ್ ಸೋಂಕಿಗೆ ಬಲಿ: 82 ಹೊಸ ಸೋಂಕು ಪ್ರಕರಣಗಳು

ಪ್ರಕರಣದ ಸಂಬಂಧ ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next