Advertisement

ಜಿಂಕೆ ಬೇಟೆಯಾಡಿದ್ದ ಕಾಡುಗಳ್ಳನಿಗೆ ಗುಂಡೇಟು: ಮೂವರು ಪರಾರಿ

12:46 PM Sep 03, 2021 | Team Udayavani |

ಮಂಡ್ಯ: ಜಿಂಕೆ ಬೇಟೆಯಾಡಿದ್ದ ಕಾಡುಗಳ್ಳನಿಗೆ ಶೂಟೌಟ್ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

Advertisement

ನಾಲ್ವರು ಕಾಡುಗಳ್ಳರು ಎರಡು ಜಿಂಕೆಗಳನ್ನು ಕೊಂದು ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿದ್ದರು. ಬಂದೂಕಿನಿಂದ ವನ್ಯಜೀವಿಯನ್ನು ಕೊಂದು ಹೆಗಲಮೇಲೆ ಹೊತ್ತುಕೊಂಡು ಬರುತ್ತಿದ್ದ ಕಳ್ಳರ ಗ್ಯಾಂಗ್ ಗಸ್ತಿನಲ್ಲಿದ್ದ ವನಪಾಲಕರಿಗೆ ಸಿಕ್ಕಿ ಬಿದ್ದಿತ್ತು.

ಇದನ್ನೂ ಓದಿ:ರೋಹಿಣಿ ಸಿಂಧೂರಿ ವಿರುದ್ದ ಮತ್ತೊಂದು ಭ್ರಷ್ಟಾಚಾರ ಆರೋಪ ಮಾಡಿದ ಸಾ.ರಾ.ಮಹೇಶ್

ತಕ್ಷಣ ಎಚ್ಚೆತ್ತ ವನಪಾಲಕರು ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಆಗ ಕಾಡುಗಳ್ಳರು ತಪ್ಪಿಸಿಕೊಳ್ಳಲು ಮುಂದಾದಾಗ ಒಬ್ಬಾತನ ಮೇಲೆ ಫೈರಿಂಗ್ ಮಾಡಿದ್ದಾರೆ.

ಗುಂಡೇಟು ತಿಂದ ವೆಂಕಟೇಶ್ ಎಂಬಾತನಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಇನ್ನು ಮೂವರು ಕಾಡುಗಳ್ಳರು ತಪ್ಪಿಸಿಕೊಂಡಿದ್ದಾರೆ. ಮಳವಳ್ಳಿಯ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next