Advertisement

ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ: ಸಂಸದ ಸುರೇಶ ಅಂಗಡಿ

12:30 AM Mar 04, 2019 | Team Udayavani |

ಬೆಳಗಾವಿ: ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಸಂಸದ ಸುರೇಶ ಅಂಗಡಿ ಪೊಲೀಸರಿಗೆ ಸೂಚನೆ ನೀಡಿದರು.

Advertisement

ರಾಮದುರ್ಗನ ಕಾಂಗ್ರೆಸ್‌ ಕಾರ್ಯಕರ್ತ ಫೇಸ್‌ಬುಕ್‌ನಲ್ಲಿ ಪಾಕ್‌ ಪರ ಘೋಷಣೆ ಕೂಗಿರುವ ಪೋಸ್ಟ್‌ ಅಪ್‌ಲೋಡ್‌ ಮಾಡಿದ್ದನ್ನು ಖಂಡಿಸಿ ಎಸ್‌ಪಿ ಕಚೇರಿ ಎದುರು ಧರಣಿ ನಡೆಸಿ ಮಾತನಾಡಿದ ಅವರು, ದೇಶದ್ರೋಹಿಗಳನ್ನು ದೇಶದಲ್ಲಿ ಇಟ್ಟುಕೊಂಡು ರಕ್ಷಣೆ ಮಾಡುವುದು ಸರಿಯಲ್ಲ. ಕೂಡಲೇ ಅವರಿಗೆ ಗುಂಡು ಹಾಕಿ ಕೊಂದು ಬಿಡಿ. ಪೊಲೀಸರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ ಎಂದರು.

ದೇಶದ್ರೋಹಿಯನ್ನು ಬಂಧಿಸಿ ಜೈಲಿಗಟ್ಟಬೇಕು.ಅದನ್ನು ಬಿಟ್ಟು ರಾಹುಲ್‌ ಗಾಂಧಿ ತರಹ ನೀವು ಮಾತನಾಡಬೇಡಿ. ಬಂಧಿಸಲು ಆಗುವುದಿಲ್ಲ ಎಂದು ಹೇಳಿಬಿಡಿ. ದೇಶದ ಹಿತ ಕಾಯಲು ಆಗದಿದ್ದರೆ ಪಾಕ್‌ಗೆ ಹೋಗಬಹುದು ಎಂದು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿ ಸುಧೀರಕುಮಾರ ರೆಡ್ಡಿ, ಪ್ರಕರಣಕ್ಕೆಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಆರೋಪಿ ಬಂಧಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next