Advertisement

ಆಪ್ ನೂತನ ಶಾಸಕ ನರೇಶ್ ಯಾದವ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: ಓರ್ವ ಸಾವು

08:38 AM Feb 13, 2020 | Mithun PG |

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಸಂದರ್ಭದಲ್ಲೇ ಆಮ್ ಆದ್ಮಿ ಪಕ್ಷದ ಚುನಾಯಿತ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ  ಎಂದು ವರದಿಯಾಗಿದೆ.  ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

Advertisement

ಮಹರೌಲಿ ಶಾಸಕ ನರೇಶ್ ಯಾದವ್ ಮತ್ತು ಬೆಂಬಲಿಗರು ತಮ್ಮ ಚುನಾವಣಾ ಕ್ಷೇತ್ರದಲ್ಲಿರುವ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುತ್ತಿದ್ದರು. ನೈರುತ್ಯ ದೆಹಲಿಯ ಕೃಷ್ಣಾಗಡ್ ಗ್ರಾಮದಲ್ಲಿ ಇವರು ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಓರ್ವ ಸಾವಿಗೀಡಾಗಿದ್ದು , ಮತ್ತೊಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ನರೇಶ್ ಯಾದವ್ ಈ ಘಟನೆ ನಿಜಕ್ಕೂ ದುರದೃಷ್ಟಕರ . ದಾಳಿಯ ಹಿಂದಿನ ಕಾರಣ ನನಗೆ ತಿಳಿದಿಲ್ಲ. ಆದರೆ ಇದ್ದಕ್ಕಿದ್ದಂತೆ ನಾಲ್ಕು ಸುತ್ತು ಗುಂಡು ಹಾರಿಸಲಾಯಿತು ಎಂದು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next