Advertisement

Statement ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು: ಜಗದೀಶ್ ಶೆಟ್ಟರ್

05:45 PM Feb 10, 2024 | Team Udayavani |

ಹುಬ್ಬಳ್ಳಿ: ಯಾವುದೇ ಪಕ್ಷದ ನಾಯಕರಾಗಿರಲಿ ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

Advertisement

ದೇಶದ ವಿಭಜನೆ ಮಾಡುವವರನ್ನು‌ ಗುಂಡಿಟ್ಟು ಕೊಲ್ಲುವ ಕಾಯ್ದೆ ತರಬೇಕೆಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಯಾರೂ ಸಹ ಈ ರೀತಿ ಹೇಳಿಕೆ ಕೊಡಬಾರದು ಎಂದರು.

ಮಹಾತ್ಮ ಗಾಂಧಿ ಹತ್ಯೆ ವಿಷಯವನ್ನೇ‌ ಹೇಳಿಕೊಂಡು ಕಾಂಗ್ರೆಸ್ ನವರು 40-50 ವರ್ಷ ದೇಶದಲ್ಲಿ ಆಡಳಿತ ಮಾಡಿದ್ದಾರೆ. ಅದೇ ವಿಷಯವಾಗಿ ಜನರನ್ನು ಮತ್ತೆ, ಮತ್ತೆ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ ಎಂದರು.

ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಿಂದ ಸ್ಪರ್ಧಿಸುವ ವಿಚಾರ ಅವರಿಗೆ ಬಿಟ್ಟಿದ್ದಾಗಿದೆ. ಪಕ್ಷದ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದರು‌.

ವೈಯಕ್ತಿಕ ಕಾರಣದಿಂದ ಪಕ್ಷದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಜಿಲ್ಲೆಯ ಎಲ್ಲಾ ಮುಖಂಡರು ಸೇರಬೇಕೆಂಬುವುದು ಮೊದಲೇ ನಿರ್ಧಾರವಾಗಿತ್ತು. ಆದ್ದರಿಂದ ಎಲ್ಲರೂ ಸೇರಿ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಯಿತು ಎಂದರು.

Advertisement

ನಾನು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ವರಿಷ್ಠರು ಚರ್ಚೆ ಮಾಡಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ‌ ಸೂಚಿಸಿದರೆ ಅದಕ್ಕೆ ಬದ್ಧ. ಈ ಬಗ್ಗೆ ನಾನು ಸಹ ಯೋಚಿಸಿಲ್ಲ. ಪಕ್ಷದ ಕೇಂದ್ರ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಅಪರೇಶನ್ ಕಮಲದ ಬಗ್ಗೆ ಗೊತ್ತಿಲ್ಲ. ನಮ್ಮ ಜತೆಗೆ ಇದ್ದವರು ಇನ್ನೆರಡು ದಿನಗಳಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next