Advertisement

ಪಾಕ್‌ ಬೆಂಬಲಿಸಿದರೆ ಕೈಕಟ್ಟಿ ಕೂರಬೇಕೇ?

11:20 PM Feb 16, 2020 | Team Udayavani |

ಚಿತ್ರದುರ್ಗ: ಹುಬ್ಬಳ್ಳಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಖಂಡನೀಯ. ಭಾರತದ ಪ್ರಜೆಗಳಾಗಿ ಪಾಕಿಸ್ತಾನವನ್ನು ಬೆಂಬಲಿಸಿದರೆ ಕೈಕಟ್ಟಿಕೊಂಡು ಸುಮ್ಮನಿರ ಬೇಕೇ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದರು.

Advertisement

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ಫ್ರೀ ಕಾಶ್ಮೀರ ಮಾಡಲು ಬಿಡುವುದಿಲ್ಲ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಇಂತಹ ದೇಶ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ನೋಡುತ್ತಾ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.

ಬೀದರ್‌ನ ಶಾಹೀನ್‌ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಪೋಷಕಿ ಅಮಾಯಕರಲ್ಲ. ಶಾಲಾ ಮಕ್ಕಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋ ಧಿಸುವ ನೆಪದಲ್ಲಿ ನಡೆಯುತ್ತಿರುವ ಹೋರಾಟದ ಮೂಲಕ ದೇಶದ್ರೋಹ ಎಸಗಲಾಗುತ್ತಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡಿದ್ದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಮನೆಯಲ್ಲಿರುವ ಬದಲು ಬೇರೆಲ್ಲೋ ಇರಬೇಕಾಗಿತ್ತು.

ಆ ಪಕ್ಷಗಳಂತೆ ಸೇಡಿನ ರಾಜಕಾರಣ ಮಾಡುವ ಸಂಸ್ಕೃತಿ ನಮ್ಮದಲ್ಲ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸರ್ಕಾರ ಹೇಗೆ ನಡೆದುಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next