Advertisement

ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌

06:05 PM Feb 22, 2022 | Team Udayavani |

ಯೋಜನೆಗೆ ಅಂತಿಮ ರೂಪ
ಮಂಗಳೂರು ತಾಲೂಕಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ನಂದಿನಿ ನದಿಯ ಮಧ್ಯದಲ್ಲಿದೆ. ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 2014ರಲ್ಲಿಯೇ ಮಾಸ್ಟರ್‌ ಪ್ಲಾನ್‌ ತಯಾರಿಸಲಾಗಿತ್ತು. ಈಗ ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಸರಕಾರ ನಿರ್ಧರಿಸಿರುವ ಕಾರಣ ಅದನ್ನು ಬದಲಾಯಿಸಲಾಗುತ್ತಿದೆ. ಯೋಜನೆಯ ರೂಪುರೇಷೆ ಸಿದ್ಧಪಡಿಸಲಾಗಿದ್ದು, ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ತಯಾರಿಸಲಾಗುತ್ತಿದೆ. ಸಂಸತ್‌ ಅಧಿವೇಶನ ಮುಗಿದ ಬಳಿಕ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಜತೆ ಚರ್ಚಿಸಿ, ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಯೋಜನೆಗೆ ಅಂತಿಮ ರೂಪ ಕೊಡಲಾಗುವುದು ಎಂದು ದೇವಸ್ಥಾನದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಅವರು ಮಾಹಿತಿ ನೀಡಿದ್ದಾರೆ.

Advertisement

ಏನೇನು ಬದಲಾವಣೆ?
ವಿಶಾಲವಾದ ವಾಹನ ಪಾರ್ಕಿಂಗ್‌ ಸೌಲಭ್ಯ, ಬದಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಬಸ್‌ ನಿಲ್ದಾಣ ಅಭಿವೃದ್ಧಿ. ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಶಾಲೆ ಅಭಿವೃದ್ಧಿ, ರಿಟೈನಿಂಗ್‌ ವಾಲ್‌ ನಿರ್ಮಾಣ.

ಕಾಶಿ ಮಾದರಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸರಕಾರ ದಿಂದ ಹಣ ಸಿಗುವುದಿಲ್ಲ. ದೇವಸ್ಥಾನದ ಹಣದಿಂದಲೇ ಖರ್ಚು ಮಾಡಬೇಕಾಗಿದೆ. ಯೋಜನೆ ಮಾತ್ರ ಸರಕಾರದ್ದು. ಕೊರೊನಾದಿಂದಾಗಿ ಈಗಾಗಲೇ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದೇವೆ. ದೇವಸ್ಥಾನಕ್ಕೆ ಬರುವ ಆದಾಯ ತುಂಬಾ ಕಡಿಮೆಯಾಗಿದೆ. ಯೋಜನೆಗೆ ಸರಕಾರ ಹಣ ಕೊಟ್ಟರೆ ಉತ್ತಮ.
-ಹರಿನಾರಾಯಣದಾಸ ಆಸ್ರಣ್ಣ, ಅರ್ಚಕರು.

Advertisement

Udayavani is now on Telegram. Click here to join our channel and stay updated with the latest news.

Next