Advertisement

ಡೆಲ್ಲಿ ಕ್ಯಾಪಿಟಲ್ಸ್‌ ತೊರೆಯಲಿದ್ದಾರೆ ಅಯ್ಯರ್‌!

08:23 PM Oct 29, 2021 | Team Udayavani |

ಹೊಸದಿಲ್ಲಿ: ಮುಂದಿನ ಐಪಿಎಲ್‌ ಆವೃತ್ತಿಗೂ ಮುನ್ನ ಮಹಾ ಹರಾಜು ಪ್ರಕ್ರಿಯೆ ನಡೆಯಲಿದ್ದು, ಚುರುಕಿನ ಬೆಳವಣಿಗೆ ಕಂಡುಬಂದಿದೆ. ಹರಾಜು ಪ್ರಕ್ರಿಯೆಗೆ ಸಂಬಂಧಿಸಿದ ನಿಯಮಗಳನ್ನು ಬಿಸಿಸಿಐ ಈಗಾಗಲೇ ಸಿದ್ಧಪಡಿಸಿದೆ.

Advertisement

ಎರಡು ಹೊಸ ತಂಡಗಳು ಕೂಡ ಸೇರ್ಪಡೆಯಾಗುತ್ತಿರುವುದರಿಂದಾಗಿ ಪೈಪೋಟಿ ಇನ್ನಷ್ಟು ಹೆಚ್ಚಾಗಲಿದೆ. ಈ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕಡೆಯಿಂದ ಅಚ್ಚರಿಯ ಸುದ್ದಿಯೊಂದು ಲಭ್ಯವಾಗಿದೆ.

ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ಹಂಗಾಮಿ ನಾಯಕನಾಗಿ ಕಾರ್ಯ ನಿರ್ವಹಿಸಿದ್ದ ರಿಷಭ್‌ ಪಂತ್‌ ಅವರನ್ನೇ ತಂಡದ ಖಾಯಂ ನಾಯಕನನ್ನಾಗಿ ಮುಂದುವರಿಸಲು ಡೆಲ್ಲಿ ಕ್ಯಾಪಿಟಲ್ಸ್‌ ಬಯಸಿದೆ.

ಹೀಗಾಗಿ ಶ್ರೇಯಸ್‌ ಅಯ್ಯರ್‌ ಫ್ರಾಂಚೈಸಿಯನ್ನು ತೊರೆಯಲಿದ್ದಾರೆ ಎಂಬ ಸುದ್ದಿ ಹರಿದಾಡತೊಡಗಿದೆ.

ಇದನ್ನೂ ಓದಿ:ಅಪ್ಪು ಅಂತಿಮ ನಮನ : ಕಂಠೀರವ ಸ್ಟೇಡಿಯಂ ಬಳಿ ನೂಕು ನುಗ್ಗಲು

Advertisement

ನಾಯಕನಾಗಿ ಯಶಸ್ಸು
ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಹಿಂದಿನ ಎರಡು ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2020ರಲ್ಲಿ ಮೊದಲ ಸಲ ಫೈನಲ್‌ ಪ್ರವೇಶವನ್ನೂ ಕಂಡಿತ್ತು. ಇಂಥದೊಂದು ಯಶಸ್ಸು ಹೊಂದಿರುವ ಅಯ್ಯರ್‌ ಮುಂದಿನ ಐಪಿಎಲ್‌ ಆವೃತ್ತಿಗೆ ಯಾವುದಾದರೊಂದು ತಂಡದ ನಾಯಕತ್ವ ವಹಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ರಾಜಸ್ಥಾನ್‌ ರಾಯಲ್ಸ್‌ , ಸನ್‌ರೈಸರ್ ಹೈದರಾಬಾದ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಮುಂದಿನ ಆವೃತ್ತಿಗೆ ಹೊಸ ನಾಯಕನನ್ನು ನೇಮಿಸುವ ಬಗ್ಗೆ ಯೋಚಿಸುತ್ತಿವೆ. ಶ್ರೇಯಸ್‌ ಅಯ್ಯರ್‌ಗೆ ಇದರಿಂದ ಲಾಭವಾಗಲಿದೆ ಎಂಬುದೊಂದು ಲೆಕ್ಕಾಚಾರ.

Advertisement

Udayavani is now on Telegram. Click here to join our channel and stay updated with the latest news.

Next