Advertisement

ಜುಲೈ 7ಕ್ಕೆ ಶ್ರೇಯಸ್ ಹೊಸ ಚಿತ್ರಕ್ಕೆ ಮುಹೂರ್ತ

12:35 PM Jun 29, 2021 | Team Udayavani |

ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್‌ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ನಂದ ಕಿಶೋರ್‌(ಪೊಗರು) ನಿರ್ದೇಶಿಸುತ್ತಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಜುಲೈ 7ರಂದು ಗವಿಪುರಂನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ಮುಹೂರ್ತಕ್ಕೂ ಮುನ್ನ ಜುಲೈ 1 ರಂದು ಶೀರ್ಷಿಕೆ ಅನಾವರಣ ಮಾಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.

Advertisement

ಬೆಂಗಳೂರು, ಬೆಳಗಾವಿ, ಹೊಸಪೇಟೆ ಹಾಗೂ ವಿದೇಶದಲ್ಲಿ ಚಿತ್ರೀಕರಣ ನಡೆಯಲಿದೆ. ಈ ಚಿತ್ರದಲ್ಲಿ ಅಭಿನಯಿಸುವುದಕ್ಕೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಕರ್ನಾಟಕದ ಅನೇಕ ಊರುಗಳಲ್ಲಿರುವ ಪ್ರತಿಭೆಗಳನ್ನು ಆನ್‌ ಲೈನ್‌ ಆಡಿಷನ್‌ ಮೂಲಕ ಆರಿಸಿಕೊಳಲಾಗಿದೆಯಂತೆ.

ಇದನ್ನೂ ಓದಿ:ಕಿರುತೆರೆ ನಟಿ shama sikander ಹಾಟ್ & ಬೋಲ್ಡ್ ಫೋಟೋಸ್

ಗುಜ್ಜಲ್‌ ಪುರುಷೋತ್ತಮ್‌ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು ಟಗರು ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಇದು ಪುರುಷೋತ್ತಮ್‌ ಅವರು ಗುಜ್ಜಲ್‌ ಟಾಕೀಸ್‌ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ.

ಚಂದನ್‌ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್‌ ಚಂದ್ರು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್‌ ಸಂಕಲನವಿದೆ. ಪ್ರಶಾಂತ್‌ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next