Advertisement

 ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ ಶ್ರೀ ಮನ್ಮಹಾರಥೋತ್ಸವ ಸಂಪನ್ನ

11:06 PM Mar 16, 2020 | Sriram |

ಪೆರ್ಡೂರು: ಉಡುಪಿ ತಾಲೂಕಿನ ಇತಿಹಾಸ ಪ್ರಸಿದ್ಧ ಪೆರ್ಡೂರು ಮಹತೋ ಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಮಾ.16ರಂದು ಶ್ರೀ ಮನ್ಮಹಾರಥೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.

Advertisement

ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸರಕಾರದ ಆದೇಶವಿರುವುದರಿಂದ ಸರಳ ಧಾರ್ಮಿಕ ಕಾರ್ಯಕ್ರಮಗಳು ಮಾತ್ರ ನಡೆದಿದ್ದು ಭಕ್ತರ ಸಂಖ್ಯೆ ಕಡಿಮೆ ಇತ್ತು.ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸುಮಾರು 2 ಸಾವಿರ ಜನ ಮಾತ್ರ ಭಾಗವಹಿಸಿದ್ದರು.

ಪೆರ್ಡೂರು ಜಾತ್ರೆ ಪ್ರತಿವರ್ಷ ವಿಶೇಷವಾಗಿ ಜನ ಜಂಗುಳಿಯಿಂದ ಕೂಡಿದ್ದು, ಈ ಭಾರಿ ಅಂಗಡಿ ಮುಂಗಟ್ಟುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದುಗೊಂಡಿದ್ದವು. ಹಿರಿಯಡಕ ಪೊಲೀಸರು ಬಂದೋಬಸ್ತ್ ಮಾಡಿದ್ದರು. ದೇವಸ್ಥಾನದ ಆಡಳಿತಾಧಿಕಾರಿ ಪ್ರದೀಪ್‌ ಕುಡೇìಕರ್‌, ಕಾರ್ಯನಿರ್ವಹಣಾಧಿಕಾರಿ ಕೆ. ರಾಜಗೋಪಾಲ ಉಪಾಧ್ಯಾಯ, ಕ್ಷೇತ್ರದ ತಂತ್ರಿ ಕೆ.ಜಿ. ರಾಘವೇಂದ್ರ ತಂತ್ರಿ, ಅರ್ಚಕ ಪಿ.ಎಸ್‌. ಜಗದೀಶ ಅಡಿಗ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next