Advertisement

ನಾಗನಕಟ್ಟೆ ವಿವಾದ: ಭಕ್ತರಿಂದ ಠಾಣೆಗೆ ದೂರು

01:23 AM Feb 15, 2023 | Team Udayavani |

ನರಿಮೊಗರು: ಪುತ್ತೂರು ತಾಲೂಕಿನ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವಿವಾದಿತ ನಾಗನಕಟ್ಟೆ ವಿಚಾರಕ್ಕೆ ಸಂಬಂಧಿಸಿ ದೇವಸ್ಥಾನದ ಭಕ್ತರು ಸಂಪ್ಯ ಠಾಣಾಧಿಕಾರಿಗೆ ದೂರು ನೀಡಿದ್ದಾರೆ.

Advertisement

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಹಲವು ಶತಮಾನಗಳ ಇತಿಹಾಸವಿದ್ದು, ಭಕ್ತರ ನಂಬಿಕೆಯ ಶ್ರದ್ಧಾ ಕೇಂದ್ರವಾಗಿರುತ್ತದೆ.

ದೇಗುಲದಲ್ಲಿ ಅಷ್ಟಮಂಗಲ ನಡೆಸಿದಂತೆ ಮತ್ತು ಅದರಲ್ಲಿ ಕಂಡುಬಂದಂತೆ ನೂತನ ನಾಗನ ಕಟ್ಟೆ ನಿರ್ಮಾಣವಾಗುತ್ತಿರುವ ಸಂದರ್ಭ ಅದು ಶಾಸ್ತ್ರಕ್ಕೆ ಅನುಗುಣವಾಗಿ ಆಗಿರುವುದಿಲ್ಲ ಮತ್ತು ಅವೈಜ್ಞಾನಿಕವಾಗಿ ನಿರ್ಮಾಣ ಆಗಿದೆ ಎಂದು ಭಕ್ತರು ದೂರಿದ್ದರು. ಭಕ್ತರ ವಿರೋಧವನ್ನು ಲೆಕ್ಕಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗಿದೆ ಎಂದು ದೂರಲಾಗಿದೆ.

ಈ ನಾಗನಕಟ್ಟೆಯ ಕಾಮಗಾರಿಯನ್ನು ತತ್‌ಕ್ಷಣ ನಿಲ್ಲಿಸಬೇಕೆಂದು ಮತ್ತು ಅವೈಜ್ಞಾನಿಕವಾಗಿ ನಿರ್ಮಾಣ ವಾಗುವ ಕಾಮಗಾರಿ ಕೆಲಸವನ್ನು ಮುಂದುವರಿಸಿದರೆ ಪ್ರತಿಭಟನೆಯನ್ನು ಮಾಡಲು ನಿರ್ಧರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next