Advertisement

ಶ್ರೀರಾಮಸೇನೆ ದತ್ತಮಾಲಾ ಅಭಿಯಾನಕ್ಕೆ ಚಾಲನೆ

06:00 AM Oct 23, 2018 | Team Udayavani |

ಚಿಕ್ಕಮಗಳೂರು: ಶ್ರೀರಾಮಸೇನೆ ಹಮ್ಮಿಕೊಂಡಿರುವ 13ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ಸೋಮವಾರ ರಾಜ್ಯಾದ್ಯಂತ ಚಾಲನೆ ಸಿಕ್ಕಿದೆ.  

Advertisement

ನಗರದ ರತ್ನಗಿರಿ ರಸ್ತೆಯ ಶ್ರೀ ಕಾಮಧೇನು ಗಣಪತಿ ದೇಗುಲದಲ್ಲಿ  ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಉಪಾಧ್ಯಕ್ಷ ಕೆ.ವಿ. ಮಹೇಶ್‌ಕುಮಾರ್‌ ದತ್ತಮಾಲೆ ಧರಿಸಿ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. 

ದತ್ತಾತ್ರೇಯರ ಪೂಜೆ ಬಳಿಕ 40ಕ್ಕೂ ಹೆಚ್ಚು ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿದರು. ದತ್ತಮಾಲಾ ಅಭಿಯಾನ ಅ.28ರವರೆಗೆ ನಡೆಯಲಿದ್ದು, ಅ.28 ರಂದು ರಾಜ್ಯಾದ್ಯಂತ ದತ್ತಮಾಲೆ ಧರಿಸಿರುವ ಶ್ರೀ ರಾಮಸೇನೆ ಕಾರ್ಯಕರ್ತರು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ. ನಂತರ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಇದರಲ್ಲಿ ವಿವಿಧ ಮಠಾಧೀಶರು, ಶ್ರೀ ರಾಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಪಾಲ್ಗೊಳ್ಳಲಿದ್ದಾರೆ. ಬಳಿಕ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ತೆರಳಿ ಪಾದುಕೆಗಳ ದರ್ಶನ ಪಡೆದು ಮಾಲೆ ವಿಸರ್ಜಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next