Advertisement

Shri Ram Sena: ದತ್ತಪೀಠ ಹಿಂದೂ ಪೀಠ ಆಗುವವರೆಗೂ ಹೋರಾಟ: ಗಂಗಾಧರ್‌ ಕುಲಕರ್ಣಿ

11:32 PM Aug 19, 2023 | Team Udayavani |

ಚಿಕ್ಕಮಗಳೂರು: ದತ್ತಪೀಠ ಸಂಪೂರ್ಣವಾಗಿ ಹಿಂದೂಗಳ ಪೀಠವಾಗುವರೆಗೂ ಶ್ರೀರಾಮ ಸೇನೆ ಹೋರಾಟ ನಡೆಸಲಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್‌ ಕುಲಕರ್ಣಿ ತಿಳಿಸಿದರು.

Advertisement

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವ ಧಿಯಲ್ಲಿ ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡಿದೆ ಹಾಗೂ ತ್ರಿಕಾಲ ಪೂಜೆಗೂ ಅವಕಾಶ ಕಲ್ಪಿಸಿದೆ. ಆ ಮೂಲಕ ಶ್ರೀರಾಮ ಸೇನೆಯ ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಿದೆ ಎಂದರು.

ದತ್ತಪೀಠದಲ್ಲಿರುವ ಅನಧಿಕೃತ ಗೋರಿಗಳನ್ನು ತೆರವುಗೊಳಿಸಿ ನಾಗೇನಹಳ್ಳಿಗೆ ಸ್ಥಳಾಂತರ ಮಾಡಬೇಕು. ಮೌಲ್ವಿಗಳನ್ನು ನಾಗೇನಹಳ್ಳಿಗೆ ಕಳಿಸಬೇಕು. ದತ್ತಪೀಠವನ್ನು ಹಿಂದೂಗಳ ಪೀಠವೆಂದು ರಾಜ್ಯ ಸರಕಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next