Advertisement

Mangaluru ಭಾವೀ ಪರ್ಯಾಯ ಶ್ರೀಗಳಿಗೆ ಪೌರ ಸಮ್ಮಾನ

12:32 AM Jan 06, 2024 | Team Udayavani |

ಮಂಗಳೂರು: ಚತುರ್ಥ ಬಾರಿಗೆ ಪರ್ಯಾಯ ಸರ್ವಜ್ಞ ಪೀಠಾರೋಹ ಣಗೈಯ್ಯಲಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ರವಿವಾರ ಮಂಗಳೂರಿನಲ್ಲಿ ಪೌರ ಸಮ್ಮಾನ ನೆರವೇರಲಿದೆ.

Advertisement

ಅಪರಾಹ್ನ 3ಕ್ಕೆ ಶಾಸಕ ವೇದವ್ಯಾಸ ಕಾಮತ್‌ ಅವರ ನೇತೃತ್ವದಲ್ಲಿ ಶರವು ದೇಗುಲದಿಂದ ಮೆರವಣಿಗೆ ನಡೆದು ಸಂಜೆ 4ಕ್ಕೆ ರಾಧಾಕೃಷ್ಣ ಮಂದಿರದಲ್ಲಿ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಪೌರ ಸಮ್ಮಾನ ಜರಗಲಿದೆ.

ಶ್ರೀಗಳು ಶನಿವಾರ ಬೆಳಗ್ಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.ಅಪರಾಹ್ನ 3ಕ್ಕೆ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ವಾದಿರಾಜ ಮಂಟಪದಲ್ಲಿ ತುಲಾಭಾರ, ಸಾರ್ವಜನಿಕ ಪಾದಪೂಜೆ ನಡೆಯಲಿದೆ.

ಸೋಮವಾರ ನೆಲ್ಲಿಕಾಯಿ ರಾಘವೇಂದ್ರ ಮಠ, ಹೊಸಬೆಟ್ಟು ರಾಘವೇಂದ್ರ ಮಠದಲ್ಲಿ ಶ್ರೀಗಳು ಪೂಜೆ ನೆರವೇರಿಸಲಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನ ಮತ್ತು ಉಡುಪಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next