Advertisement

ಶೃಂಗೇರಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ತನಿಖಾಧಿಕಾರಿ ಸಸ್ಪೆಂಡ್

02:49 PM Feb 05, 2021 | Team Udayavani |

ಚಿಕ್ಕಮಗಳೂರು: ಶೃಂಗೇರಿಯ ಅಪ್ರಾಪ್ತ ವಯಸ್ಕ ಹುಡುಗಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯಾಗಿದ್ದ ಸಿದ್ದರಾಮಯ್ಯ ಬಿ.ಎಂ ರನ್ನು ಅಮಾನತು ಮಾಡಲಾಗಿದೆ.

Advertisement

ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಎಎಸ್ಪಿ ಶೃತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದನ್ನೂ ಓದಿ:ವಿದ್ಯುತ್‌ ಕಂಬಗಳಿರುವ ಸುಸಜ್ಜಿತ ರಸ್ತೆಯಲ್ಲಿ ಬೆಳಕೇ ಇಲ್ಲ!

ಶೃಂಗೇರಿಯ ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ. ಅವರು ಘಟನೆ ನಡೆದು ಎರಡು ದಿನದ ಬಳಿಕ ಕೇಸ್ ದಾಖಲಿಸಿದ್ದರು ಎಂದು ಆರೋಪ ಕೇಳಿಬಂದಿತ್ತು.

ಪ್ರತಿಭಟನೆ: ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next