Advertisement

ಶ್ರೀರಂಗಪಟ್ಟಣ : ಜನರನ್ನು ಭಯಭೀತರನ್ನಾಗಿಸಿದ್ದ ಬೃಹದಾಕಾರದ ಮೊಸಳೆ ಬಲೆಗೆ

08:17 PM Nov 22, 2021 | Team Udayavani |

ಶ್ರೀರಂಗಪಟ್ಟಣ: ಹಲವು ತಿಂಗಳುಗಳಿಂದ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುವುದಲ್ಲದೆ, ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಭಯಭೀತರನ್ನಾಗಿಸಿದ್ದ ಬೃಹದಾಕಾರದ ಮೊಸೆಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಸೋಮವಾರ ಯಶಸ್ವಿಯಾಗಿದ್ದಾರೆ.

Advertisement

ತಾಲೂಕಿನ ವಿಶ್ವ ವಿಖ್ಯಾತ ರಂಗನತಿಟ್ಟು ಪಕ್ಷಿದಾಮದ ಆಸು ಪಾಸಿನಲ್ಲಿ ಹಲವು ತಿಂಗಳುಗಳಿಂದ ಸಾರ್ವಜನಿಕವಾಗಿ ರಸ್ತೆ ಹಾಗೂ ಜಮೀನುಗಳಲ್ಲಿ ಕಾಣಿಸಿಕೊಂಡು ರೈತರ ಕುರಿ, ಮೇಕೆ ಸೇರಿದಂತೆ ಇತರೆ ಪ್ರಾಣಿಗಳನ್ನು ತಿಂದು ಹಾಕಿ ರೈತರ ಸಂಕಷ್ಟಕ್ಕೆ ಕಾರಣವಾಗಿತ್ತು.

ಈ ಸಂಬಂಧ ರೈತರು ಹಲವು ಭಾರಿ ಮೊಸಳೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು. ಅಲ್ಲದೇ ಸಂಜೆ ವೇಳೆ ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನಿತ್ಯ ಕಾಣಿಸಿಕೊಳ್ಳುತ್ತಿರುವುದರನ್ನು ಪ್ರವಾಸಿಗರು ಪೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ವೈರಲ್ ಸಹ ಆಗಿತ್ತು.

ಅಧಿಕಾರಿಗಳು ಮೊಸಳೆ ಸೆರೆ ಹಿಡಿಯುವ ಸಲುವಾಗಿ ಬೋನ್ ಇಟ್ಟು, ಕಾರ್ಯಪ್ರವೃತ್ತರಾಗಿದ್ದರು.  ಸಂಜೆ ಸ್ಥಳೀಯ ರೈತರ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಕೆ. ಸುರೇಂದ್ರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬಲೆ ಸೇರಿದಂತೆ ಇತರೆ ಸಲಕರೆಗಳೊಂದಿಗೆ ಸುಮಾರು 35 ರಿಂದ 40 ವರ್ಷದ, 7.6 ಅಡಿ ಉದ್ದದ,  ಮೊಸಳೆಯನ್ನು ಸೆರೆ ಡಿಯುವ ಮೂಲಕ ರೈತರು ಹಾಗೂ ಸಾರ್ವಜನಿಕರ ಆತಂಕವನ್ನು ಅರಣ್ಯ ಇಲಾಖೆ ಸಿಬ್ಬಂದಿ ದೂರಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next