Advertisement

ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯರಿಂದ ತಹಶೀಲ್ದಾರ್ ಗೆ ಹಿಗ್ಗಾಮುಗ್ಗಾ ತರಾಟೆ

07:45 PM Jan 07, 2022 | Team Udayavani |

ಶ್ರೀರಂಗಪಟ್ಟಣ: ತೀವ್ರವಾಗಿ ಬಾಧಿಸಿರುವ ಕೊರೋನಾ ಸೋಂಕಿತ ರೋಗಿಗಳಿಗೆ ಸರಿಯಾದ ಚಿಕಿತ್ಸೆ , ಊಟ,ತಿಂಡಿ ,ಶೌಚಾಲಯ ,ಸ್ನಾನಕ್ಕೆ ನೀರು, ಇತರೆ ಆರೈಕೆ ಮತ್ತು ಅಗತ್ಯ ಸೌಲಭ್ಯಗಳನ್ನು ನೀಡದ ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯದ ಬಗ್ಗೆ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ತಹಶೀಲ್ದಾರ್ ಅವರಿಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

ಶ್ರೀರಂಗಪಟ್ಟಣದ ಕೊವಿಡ್ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಕೊರೊನಾ ಸೊಂಕಿತರಿಂದ ಅಹವಾಲು ಸ್ವೀಕರಿಸಿ ಅವರು ಅವ್ಯವಸ್ಥೆ, ಜಿಲ್ಲಾ, ತಾಲೂಕು ಆಡಳಿತ ನಿರ್ಲಕ್ಷ್ಯದ ಬಗ್ಗೆ ಕಿಡಿಕಾರಿದರು.

ಜಿಲ್ಲಾಧಿಕಾರಿಗಳಿಗೂ ದೂರವಾಣಿ ಕರೆ ಮಾಡಿ ಸೌಲಭ್ಯಕುರಿತು ದೂರಿದಾಗ ಜಿಲ್ಲಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಮಂಡ್ಯ ಜಿಲ್ಲಾಡಳಿತದ ವೈಫಲ್ಯ ದ ವಿರುದ್ದ ಮುಖ್ಯ ಕಾರ್ಯದರ್ಶಿಯವರಿಗೆ ದೂರು ನೀಡುವುದಾಗಿ ತಿಳಿಸಿದರು. ಹೀಗೆ ಮುಂದುವರೆದರೆ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ತಹಶೀಲ್ದಾರ್ ಶ್ವೇತಾ,ವೈದ್ಯಾಧಿಕಾರಿ ಡಾ.ವೆಂಕಟೇಶ್,ಆಡಳಿತಾಧಿಕಾರಿ ಡಾ.ಮಾರುತಿ, ಪುರಸಭೆ ಅಧ್ಯಕ್ಷೆ ನಿರ್ಮಲ ಇತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next