Advertisement

Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ

09:42 PM Sep 17, 2024 | Team Udayavani |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಮತ್ತು ಮಿತ್ರಪಕ್ಷಗಳ ಸದಸ್ಯರು ಆಕ್ಷೇಪಾರ್ಹ ಹಾಗೂ ಹಿಂಸಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಪ್ರಧಾನಿ ಮೋದಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

Advertisement

ಇಂತಹ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದರಿಂದ ಭಾರತೀಯ ರಾಜಕೀಯವು ಅವನತಿಯತ್ತ ಸಾಗುವುದನ್ನು ತಡೆಯಬಹುದು. ನಿಮ್ಮ ನಾಯಕರಿಗೆ ಶಿಸ್ತಿನಿಂದ ಇರಲು ಸೂಚಿಸಿ ಎಂದು ಖರ್ಗೆ ಹೇಳಿದ್ದಾರೆ.

ಈಗ ಬಿಜೆಪಿ ಮತ್ತು ಮಿತ್ರ ಪಕ್ಷದವರು ಬಳಸುತ್ತಿರುವ ಭಾಷೆಯು ಭವಿಷ್ಯದ ದೃಷ್ಟಿಯಲ್ಲಿ ಮಾರಕವಾಗಿದೆ. ಇನ್ನೂ ನೋವಿನ ಸಂಗತಿಯೆಂದರೆ, ಕೇಂದ್ರ ಸರ್ಕಾರದ ರೈಲ್ವೆ ಖಾತೆ ರಾಜ್ಯ ಸಚಿವ ಪ್ರತಿಪಕ್ಷದ ನಾಯಕನನ್ನು “ನಂಬರ್‌ ಒನ್‌ ಭಯೋತ್ಪಾದಕ’ ಎಂದು ಕರೆದಿದ್ದಾರೆ. ಇನ್ನು “ಮಹಾರಾಷ್ಟ್ರದಲ್ಲಿ ನಿಮ್ಮ ಮಿತ್ರಪಕ್ಷದ ಶಾಸಕರೊಬ್ಬರು, ರಾಹುಲ್‌ ನಾಲಿಗೆ ಕತ್ತರಿಸಿದರೆ 11 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ’ ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next